ಶಿರಾ: ಬಣ ರಾಜಕೀಯ ಮತ್ತು ಆಂತರಿಕ ಕಚ್ಚಾಟದಿಂದ ರಾಜ್ಯದಲ್ಲಿ ಒಡೆದ ಮನೆಯಂತಾಗಿರುವ ಕಾಂಗ್ರೆಸ್ ಪಕ್ಷ ಚುನಾವಣೆ ಫಲಿತಾಂಶದ ನಂತರ ಮೂರು ಹೋಳಾಗಲಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ.
ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಶಿರಾ ಕ್ಷೇತ್ರದಲ್ಲಿಕಾಂಗ್ರೆಸ್ನವರೇ ಅವರ ಅಭ್ಯರ್ಥಿಯನ್ನು ಸೋಲಿಸಲಿದ್ದು, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಗೆಲುವು ಸಾಧಿಸುವುದು ಖಚಿತ. ಹಾಗಾಗಿ ಚುನಾವಣೆ ನಂತರ ಕಾಂಗ್ರೆಸ್ ಕೂಡ ಮೂರು ಹೋಳಾಗುವುದು ಕೂಡ ಅಷ್ಟೇ ಖಚಿತ’ ಎಂದರು.
‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಈಗಲೇ ಮುಖ್ಯಮಂತ್ರಿ ಕುರ್ಚಿಗೆ ಜಗಳವಾಡುತ್ತಿದ್ದಾರೆ. ಪಕ್ಷದಲ್ಲಿ ಅಂತರಿಕ ಜಗಳ ಹೆಚ್ಚಾಗಿ ಒಬ್ಬರ ಕಾಲು ಒಬ್ಬರು ಎಳೆಯುತ್ತಿದ್ದಾರೆ’ ಎಂದರು.