ಬೆಂಗಳೂರು: ‘ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೊ ಯಾತ್ರೆಯ ಸಂದೇಶಗಳಾದ ಭ್ರಾತೃತ್ವ, ಪ್ರೀತಿ, ಶಾಂತಿ ವಿಚಾರಗಳನ್ನು ಜನರಿಗೆ ತಲುಪಿಸಲು ಗುರುವಾರದಿಂದ (ಜ. 26) ‘ಕೈ’ಗೆ ‘ಕೈ’ ಜೋಡಿಸಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮಾರ್ಚ್ 26ರವರೆಗೆ ನಡೆಯಲಿದೆ’ ಎಂದು ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಸುಪ್ರಿಯಾ ಶ್ರಿನಾಟೆ ತಿಳಿಸಿದರು.