ಮೈಸೂರು: ‘ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಆಯ್ಕೆ ಮಾಡಬೇಕು’ ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
‘ಅವರು ಪ್ರಧಾನಿಯಾಗಿದ್ದವರು. ಮುಖ್ಯಮಂತ್ರಿಯೂ, ಸಚಿವರೂ ಆಗಿದ್ದರು. ರಾಜಕೀಯ ಸಂಧ್ಯಾ ಕಾಲದಲ್ಲಿರುವ ಅವರಿಗೆ ನಾಡಹಬ್ಬಕ್ಕೆ ಚಾಲನೆ ನೀಡುವ ಗೌರವ ದೊರಕಿಸಿಕೊಡಬೇಕು’ ಎಂದರು ವಿಶ್ವನಾಥ್ ಹೇಳಿದರು.