ಬೆಂಗಳೂರು: ‘ಶಾಲಾ ಶಿಕ್ಷಕರನ್ನು ಕೊರೊನಾ ಸೇನಾನಿಗಳು ಎಂದು ಪರಿಗಣಿಸಿ, ಅವರಿಗೆ ಕೋವಿಡ್ ಲಸಿಕೆ ನೀಡಲು ಆದ್ಯತೆ ನೀಡಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಪ್ರತ್ಯೇಕ ಪತ್ರ ಬರೆದು ಮನವಿ ಮಾಡಿದ್ದಾರೆ.