<p><strong>ಬೆಂಗಳೂರು: </strong>‘ನನ್ನ ಹೆಸರು ಹಾಗೂ ಗೌರವಕ್ಕೆ ಧಕ್ಕೆ ತರಲು ಪೊಲೀಸರು ಪಿತೂರಿ ಮಾಡುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ನನಗೆ ನ್ಯಾಯ ಒದಗಿಸುವಂತೆ ಮಹಿಳಾ ಆಯೋಗಕ್ಕೆ ದೂರು ನೀಡುತ್ತೇನೆ’ ಎಂದು ‘ಇಂಡೇಲ್ ಮನಿ’ ಕಂಪನಿ ವ್ಯವಸ್ಥಾಪಕಿ ಆಗಿದ್ದ ಕೆ.ಓ. ಸುನಂದಾ ತಿಳಿಸಿದ್ದಾರೆ.</p>.<p>‘ಇಂಡೇಲ್ ಮನಿ ವ್ಯವಸ್ಥಾಪಕಿ ಪತ್ತೆಗೆ ವಾರೆಂಟ್’ ಸುದ್ದಿಗೆ ಪ್ರತಿಕ್ರಿಯೆ ನೀಡಿರುವ ಸುನಂದಾ, ‘ನನ್ನ ಹಾಗೂ ಸಿಬ್ಬಂದಿ ವಿರುದ್ಧ ಬೇಗೂರು ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಎಲ್ಲ ಹಣವನ್ನು ಕಂಪನಿಗೆ ಈಗಾಗಲೇ ಪಾವತಿ ಮಾಡಲಾಗಿದೆ’ ಎಂದಿದ್ದಾರೆ.</p>.<p>‘ಪ್ರಕರಣದಲ್ಲಿ ಜಾಮೀನು ಪಡೆದು ಕೊಂಡಿದ್ದೆ. ಜಾಮೀನು ರದ್ದುಪಡಿಸುವಂತೆ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.’ ‘ಅದಾದ ನಂತರ ಠಾಣೆಗೆ ಹೋಗಿ ವಿಚಾರಣೆ ಎದುರಿಸಿದೆ. ಬಳಿಕವೂ ನೋಟಿಸ್ ನೀಡಿದ್ದರು. ಉತ್ತರಿಸಲು ಫೆ. 19ರವರೆಗೆ ಕಾಲಾ<br />ವಕಾಶ ಇತ್ತು. ಅಷ್ಟರಲ್ಲೇ, ನಾನು ತಲೆಮರೆಸಿಕೊಂಡಿರುವುದಾಗಿ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಕಾನ್ಸ್ಟೆಬಲೊಬ್ಬರು ನನ್ನ ಬಳಿ ಹಣಕ್ಕೂ ಬೇಡಿಕೆ ಇಡುತ್ತಿದ್ದಾರೆ’ ಎಂದೂ ಸುನಂದಾ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ನನ್ನ ಹೆಸರು ಹಾಗೂ ಗೌರವಕ್ಕೆ ಧಕ್ಕೆ ತರಲು ಪೊಲೀಸರು ಪಿತೂರಿ ಮಾಡುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ನನಗೆ ನ್ಯಾಯ ಒದಗಿಸುವಂತೆ ಮಹಿಳಾ ಆಯೋಗಕ್ಕೆ ದೂರು ನೀಡುತ್ತೇನೆ’ ಎಂದು ‘ಇಂಡೇಲ್ ಮನಿ’ ಕಂಪನಿ ವ್ಯವಸ್ಥಾಪಕಿ ಆಗಿದ್ದ ಕೆ.ಓ. ಸುನಂದಾ ತಿಳಿಸಿದ್ದಾರೆ.</p>.<p>‘ಇಂಡೇಲ್ ಮನಿ ವ್ಯವಸ್ಥಾಪಕಿ ಪತ್ತೆಗೆ ವಾರೆಂಟ್’ ಸುದ್ದಿಗೆ ಪ್ರತಿಕ್ರಿಯೆ ನೀಡಿರುವ ಸುನಂದಾ, ‘ನನ್ನ ಹಾಗೂ ಸಿಬ್ಬಂದಿ ವಿರುದ್ಧ ಬೇಗೂರು ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಎಲ್ಲ ಹಣವನ್ನು ಕಂಪನಿಗೆ ಈಗಾಗಲೇ ಪಾವತಿ ಮಾಡಲಾಗಿದೆ’ ಎಂದಿದ್ದಾರೆ.</p>.<p>‘ಪ್ರಕರಣದಲ್ಲಿ ಜಾಮೀನು ಪಡೆದು ಕೊಂಡಿದ್ದೆ. ಜಾಮೀನು ರದ್ದುಪಡಿಸುವಂತೆ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.’ ‘ಅದಾದ ನಂತರ ಠಾಣೆಗೆ ಹೋಗಿ ವಿಚಾರಣೆ ಎದುರಿಸಿದೆ. ಬಳಿಕವೂ ನೋಟಿಸ್ ನೀಡಿದ್ದರು. ಉತ್ತರಿಸಲು ಫೆ. 19ರವರೆಗೆ ಕಾಲಾ<br />ವಕಾಶ ಇತ್ತು. ಅಷ್ಟರಲ್ಲೇ, ನಾನು ತಲೆಮರೆಸಿಕೊಂಡಿರುವುದಾಗಿ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಕಾನ್ಸ್ಟೆಬಲೊಬ್ಬರು ನನ್ನ ಬಳಿ ಹಣಕ್ಕೂ ಬೇಡಿಕೆ ಇಡುತ್ತಿದ್ದಾರೆ’ ಎಂದೂ ಸುನಂದಾ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>