'ಸಿಕ್ಕಿಬಿದ್ದಿರುವ ಆರೋಪಿಗಳು ಗಾಂಧಿನಗರದ ಹೋಟೆಲ್ನಲ್ಲಿ ತಂಗಿದ್ದರು. ಪರೀಕ್ಷೆ ಬರೆಯಬೇಕಿದ್ದ ಅಭ್ಯರ್ಥಿಗಳ ಹೆಸರಲ್ಲಿ ರೂಂ ಬುಕ್ ಮಾಡಲಾಗಿತ್ತು. ಈ ಸಂಬಂಧ ಹೋಟೆಲ್ನಲ್ಲಿ ತಪಾಸಣೆ ನಡೆಸಲಾಗಿದೆ. ಒಂದು ಕಾರನ್ನು ಜಪ್ತಿ ಮಾಡಲಾಗಿದೆ. ವಿಚಾರಣೆ ಮುಂದುವರಿದಿದೆ. ಪರೀಕ್ಷೆಯಲ್ಲಿ ನಡೆದಿರುವ ಈ ಅಕ್ರಮದ ಕುರಿತು ಪೊಲೀಸ್ ನೇಮಕಾತಿ ವಿಭಾಗಕ್ಕೆ ವರದಿ ಸಲ್ಲಿಸಲಾಗುವುದು' ಎಂದೂ ಸಂಜೀವ್ ಪಾಟೀಲ ತಿಳಿಸಿದ್ದಾರೆ.