<p><strong>ಬೆಂಗಳೂರು</strong>: 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 27ನೇ ರ್ಯಾಂಕ್ ಪಡೆಯುತ್ತಿದ್ದಂತೆ ಎರಡು ಸ್ಟಾರ್ ಸಮೇತ ಸಮವಸ್ತ್ರ ಧರಿಸಿದ್ದ ಆರೋಪದಡಿ ವಿವೇಕನಗರ ಠಾಣೆ ಕಾನ್ಸ್ಟೆಬಲ್ ಬಸನಗೌಡ ಟಿ. ಕರೇಗೌಡರ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.</p>.<p>ಪಿಎಸ್ಐ ನೇಮಕಾತಿ ಆದೇಶಕ್ಕೂ ಮುನ್ನವೇಹಾವೇರಿ ತಾಲೂಕಿನ ಗುಡಸಲಕೊಪ್ಪ ಗ್ರಾಮದ ಬಸನಗೌಡ ಕರೇಗೌಡ, ಸಮವಸ್ತ್ರ ಧರಿಸಿ ತಮ್ಮೂರಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ್ದ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್, ಕಾನ್ಸ್ಟೆಬಲ್ ಬಸನಗೌಡನನ್ನುಅಮಾನತು ಮಾಡಿದ್ದಾರೆ.</p>.<p>ಪಿಎಸ್ಐ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಬಸನಗೌಡ ಅವರನ್ನೂ ವಿಚಾರಣೆ ಮಾಡಿದ್ದರು. ಒಎಂಆರ್ ಪ್ರತಿ ಹಾಗೂ ಇತರೆ ದಾಖಲೆಗಳನ್ನು ಪಡೆದಿದ್ದರು. ವಿಚಾರಣೆ ಎದುರಿಸಿದ್ದ ಬಸನಗೌಡ, ನಂತರ ಕರ್ತವ್ಯಕ್ಕೆ ಹಾಜರಾಗಿದ್ದರು.</p>.<p>‘ನೇಮಕಾತಿ ಆದೇಶವಿಲ್ಲದೇ ಸಮವಸ್ತ್ರ ಧರಿಸುವುದು ನಿಯಮ ಬಾಹಿರ. ಹೀಗಾಗಿ, ಬಸನಗೌಡ ಅವರನ್ನು ಅಮಾನತು ಮಾಡಲಾಗಿದೆ. ಇಲಾಖೆ ವಿಚಾರಣೆಗೆ ಆದೇಶಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p><a href="https://www.prajavani.net/india-news/there-is-a-swimming-pool-in-pm-modi-airplane-says-congress-leader-adhir-ranjan-chowdhury-934270.html" itemprop="url">ಮೋದಿ ವಿಮಾನದಲ್ಲಿ ಐಷಾರಾಮಿ ಈಜುಕೊಳವಿದೆ: ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 27ನೇ ರ್ಯಾಂಕ್ ಪಡೆಯುತ್ತಿದ್ದಂತೆ ಎರಡು ಸ್ಟಾರ್ ಸಮೇತ ಸಮವಸ್ತ್ರ ಧರಿಸಿದ್ದ ಆರೋಪದಡಿ ವಿವೇಕನಗರ ಠಾಣೆ ಕಾನ್ಸ್ಟೆಬಲ್ ಬಸನಗೌಡ ಟಿ. ಕರೇಗೌಡರ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.</p>.<p>ಪಿಎಸ್ಐ ನೇಮಕಾತಿ ಆದೇಶಕ್ಕೂ ಮುನ್ನವೇಹಾವೇರಿ ತಾಲೂಕಿನ ಗುಡಸಲಕೊಪ್ಪ ಗ್ರಾಮದ ಬಸನಗೌಡ ಕರೇಗೌಡ, ಸಮವಸ್ತ್ರ ಧರಿಸಿ ತಮ್ಮೂರಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ್ದ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್, ಕಾನ್ಸ್ಟೆಬಲ್ ಬಸನಗೌಡನನ್ನುಅಮಾನತು ಮಾಡಿದ್ದಾರೆ.</p>.<p>ಪಿಎಸ್ಐ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಬಸನಗೌಡ ಅವರನ್ನೂ ವಿಚಾರಣೆ ಮಾಡಿದ್ದರು. ಒಎಂಆರ್ ಪ್ರತಿ ಹಾಗೂ ಇತರೆ ದಾಖಲೆಗಳನ್ನು ಪಡೆದಿದ್ದರು. ವಿಚಾರಣೆ ಎದುರಿಸಿದ್ದ ಬಸನಗೌಡ, ನಂತರ ಕರ್ತವ್ಯಕ್ಕೆ ಹಾಜರಾಗಿದ್ದರು.</p>.<p>‘ನೇಮಕಾತಿ ಆದೇಶವಿಲ್ಲದೇ ಸಮವಸ್ತ್ರ ಧರಿಸುವುದು ನಿಯಮ ಬಾಹಿರ. ಹೀಗಾಗಿ, ಬಸನಗೌಡ ಅವರನ್ನು ಅಮಾನತು ಮಾಡಲಾಗಿದೆ. ಇಲಾಖೆ ವಿಚಾರಣೆಗೆ ಆದೇಶಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p><a href="https://www.prajavani.net/india-news/there-is-a-swimming-pool-in-pm-modi-airplane-says-congress-leader-adhir-ranjan-chowdhury-934270.html" itemprop="url">ಮೋದಿ ವಿಮಾನದಲ್ಲಿ ಐಷಾರಾಮಿ ಈಜುಕೊಳವಿದೆ: ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>