ಸಿರವಾರ ತಾಲ್ಲೂಕಿನ ಗಣದಿನ್ನಿ ಗ್ರಾಮದ ಬಸವನಗೌಡ ಅವರು ಪ್ರಸ್ತುತ ಬೆಂಗಳೂರಿನ ಕೋರಮಂಗಲ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮಾನ್ವಿ ತಾಲ್ಲೂಕಿನ ಜೀನೂರು ಗ್ರಾಮದ ಜಯಶ್ರೀ ಅವರು ಪ್ರಸ್ತುತ ಬೆಂಗಳೂರಿನ ಸಂಪಿಗೆಹಳ್ಳಿ ಠಾಣೆಯಲ್ಲಿ ಕರ್ತವ್ಯ ನಿರ್ವವಹಿಸುತ್ತಿದ್ದಾರೆ.ಸರ್ಕಾರಿ ಸೇವೆಯಲ್ಲಿದ್ದರೂ ಸರಳವಾಗಿ ವಿವಾಹ ಮಾಡಿಕೊಂಡಿದ್ದು ಗಮನ ಸೆಳೆಯಿತು. ಇಬ್ಬರು ಕೈಗೊಂಡ ನಿರ್ಧಾರವನ್ನು ಪೊಲೀಸ್ ಸ್ನೇಹಿತರು ಅಭಿನಂದಿಸಿದರು.