<p><strong>ಬೆಳಗಾವಿ: </strong>‘ರಾಜ್ಯ ಸರ್ಕಾರವು ತ್ವರಿತವಾಗಿ ಭೂಸ್ವಾಧೀನ ಮಾಡಿಕೊಟ್ಟರೆ, ಅಗತ್ಯ ಅನುಮತಿ ಮೊದಲಾದವುಗಳಲ್ಲಿ ಸಹಕರಿಸಿದರೆ 2024ರ ವೇಳೆಗೆ ಕರ್ನಾಟಕದಲ್ಲೂ ಅಮೆರಿಕಕ್ಕೆ ಸರಿಸಮನಾಗಿ ಹೆದ್ದಾರಿಗಳನ್ನು ನಿರ್ಮಿಸಿಕೊಡಲಾಗುವುದು’ ಎಂದು ಕೇಂದ್ರ ಭೂಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದರು.</p>.<p>ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಗಳ ವ್ಯಾಪ್ತಿಯಲ್ಲಿ ₹ 3,972 ಕೋಟಿ ಮೊತ್ತದಲ್ಲಿ ಕೈಗೊಂಡಿರುವ ವಿವಿಧ 5 ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.</p>.<p><strong>ಇನ್ನಷ್ಟು ಯೋಜನೆ ಸೇರ್ಪಡೆ</strong></p>.<p>‘ಪ್ರತಿ ಕ್ಷೇತ್ರದ ಅಭಿವೃದ್ಧಿಯೂ ರಸ್ತೆ ಸಂಪರ್ಕವನ್ನು ಅವಲಂಬಿಸಿದೆ. ಆದ್ದರಿಂದ ರಸ್ತೆ ಸಂಪರ್ಕ ಜಾಲ ಸದೃಢಗೊಳಿಸಲು ಸರ್ಕಾರ ಬದ್ಧವಾಗಿದೆ. ಭಾರತಮಾಲಾ-2 ಯೋಜನೆಯಲ್ಲಿ ಈ ಭಾಗದ ಇನ್ನಷ್ಟು ಹೆದ್ದಾರಿ ಯೋಜನೆಗಳನ್ನು ಸೇರಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>‘9ಸಾವಿರ ಕಿ.ಮೀ. ಉದ್ದದ ಗ್ರೀನ್ಫೀಲ್ಡ್ ಹಾಗೂ ಹೆದ್ದಾರಿ ಕಾರಿಡಾರ್ ಯೋಜನೆಯನ್ನು 3 ಲಕ್ಷ ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಜಾರಿಗೊಳಿಸಲಾಗುತ್ತಿದೆ. ಇದರಲ್ಲಿ ಬೆಂಗಳೂರು-ಚೆನೈ ಯೋಜನೆ ಕೂಡ ಸೇರಿದೆ. ದೆಹಲಿ-ಮುಂಬೈ ಹೆದ್ದಾರಿಯಲ್ಲಿ 120 ಕಿ.ಮೀ.ವೇಗದಲ್ಲಿ ವಾಹನ ಚಲಾಯಿಸಬಹುದು. ಇದರಿಂದ ಎರಡು ನಗರಗಳ ನಡುವಿನ ಪ್ರಯಾಣ ಅವಧಿ 12 ಗಂಟೆಗೆ ಇಳಿಕೆಯಾಗಲಿದೆ’ ಎಂದು ತಿಳಿಸಿದರು.</p>.<p>‘ಬೆಂಗಳೂರಿನ ಸಂಚಾರ ದಟ್ಟಣೆ ಹಾಗೂ ನಗರೀಕರಣದ ಒತ್ತಡ ನಿಯಂತ್ರಿಸುವ ದೃಷ್ಟಿಯಿಂದ ಹೆದ್ದಾರಿಗಳ ಪಕ್ಕದಲ್ಲಿ ಭೂಸ್ವಾಧೀನ ಮಾಡಿಕೊಂಡು ಸ್ಮಾರ್ಟ್ ವಿಲೇಜ್ ಹಾಗೂ ಕೈಗಾರಿಕೆ ಸ್ಥಾಪಿಸುವ ಮೂಲಕ ಪರ್ಯಾಯ ಮಾರ್ಗ ಕಂಡುಕೊಳ್ಳಬಹುದು. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಯೋಜನೆ ರೂಪಿಸಿದರೆ ಕೇಂದ್ರದಿಂದ ಎಲ್ಲ ರೀತಿಯ ನೆರವನ್ನೂ ಕೊಡಲಾಗುವುದು’ ಎಂದು ಹೇಳಿದರು.</p>.<p><strong>ಬೆಳವಡಿ ಮಲ್ಲಮ್ಮ ಸ್ಮರಣೆ</strong></p>.<p>‘ರಾಜ್ಯ ಸರ್ಕಾರವು ರಸ್ತೆ ಯೋಜನೆಗಳಿಗೆ ಭೂಸ್ವಾಧೀನ ಮಾಡಿಕೊಟ್ಟರೆ ಪ್ರವಾಸೋದ್ಯಮ ಹಾಗೂ ಕೈಗಾರಿಕೆಗಳ ಅಭಿವೃದ್ಧಿಗೆ ಪೂರಕ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುವುದು’ ಎಂದರು.</p>.<p>‘ಭಾರತ ಮಾಲಾ-2 ಯೋಜನೆಯಲ್ಲಿ ಪುಣೆ-ಬೆಂಗಳೂರು ರಸ್ತೆಯ ಈಗಿನ ಅಂತರವನ್ನು 100 ಕಿ.ಮೀ. ಕಡಿಮೆಗೊಳಿಸುವ ಯೋಜನೆ ರೂಪಿಸಲಾಗಿದೆ. ಮುಂದೆ ಇದು ಬೆಂಗಳೂರು-ಚೆನೈ ಹೆದ್ದಾರಿಗೆ ಸಂಪರ್ಕ ಕಲ್ಪಿಸಲಿದೆ’ ಎಂದು ವಿವರಿಸಿದರು.</p>.<p>‘ಈಗ ಶಂಕುಸ್ಥಾಪನೆ ನೆರವೇರಿಸಿರುವ ರಾಷ್ಟ್ರೀಯ ಹೆದ್ದಾರಿಗಳಿಂದ ಈ ಭಾಗದ ರಸ್ತೆ ಸಂಪರ್ಕ ಮತ್ತಷ್ಟು ಸುಧಾರಿಸಲಿದೆ. ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ರಸ್ತೆ ಸಂಪರ್ಕವನ್ನು ಉತ್ತಮಪಡಿಸಲಿವೆ. ಇದರಿಂದ ಕಬ್ಬು ಸಾಗಣೆ, ಕೈಗಾರಿಕೆಗಳಿಗೆ ಅನುಕೂಲವಾಗಲಿದೆ’ ಎಂದರು.</p>.<p>‘ರಾಣಿ ಬೆಳವಡಿ ಮಲ್ಲಮ್ಮ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ನಡುವಿನ ಸಂಬಂಧವು ಮರಾಠಾ-ಕನ್ನಡಿಗರ ಸಹೋದರತ್ವಕ್ಕೆ ಸಾಕ್ಷಿಯಾಗಿದೆ’ ಎಂದು ಗಡ್ಕರಿ ಬಣ್ಣಿಸಿದರು.</p>.<p><strong>ಜಲಶಕ್ತಿ ಯೋಜನೆ</strong></p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ‘ಕಿತ್ತೂರಿನಿಂದ ಬೆಳಗಾವಿ ಮೂಲಕ ಮಹಾರಾಷ್ಟ್ರ ಗಡಿಯವರೆಗಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸಂಪೂರ್ಣವಾಗಿ ಜಲಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಬೆಳಗಾವಿ ಜಿಲ್ಲೆಯಿಂದ ಆರಂಭಿಸಲಾಗುವ ಈ ಯೋಜನೆಯನ್ನು ಮುಂಬರುವ ದಿನಗಳಲ್ಲಿ ರಾಜ್ಯದಾದ್ಯಂತ ಅನುಷ್ಢಾನಗೊಳಿಸಲಾಗುವುದು. ಆ ಭಾಗದಲ್ಲಿ ಲಭ್ಯವಿರುವ ನೀರನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು’ ಎಂದು ಘೋಷಿಸಿದರು.</p>.<p>‘ರಾಜ್ಯದ ಎಲ್ಲ ಹೆದ್ದಾರಿ ಪಕ್ಕದಲ್ಲಿ ಜಲಶಕ್ತಿ ಯೋಜನೆ ಜಾರಿಗೊಳಿಸುವ ಮೂಲಕ ಅಭಿವೃದ್ಧಿಗೆ ಹೊಸ ಆಯಾಮ ಒದಗಿಸಲಾಗುವುದು’ ಎಂದು ತಿಳಿಸಿದರು.</p>.<p>‘ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧೆಡೆ ವರ್ತುಲ ರಸ್ತೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು’ ಎಂದು ಕೇಂದ್ರ ಸಚಿವರನ್ನು ಕೋರಿದರು.</p>.<p>ಕೋವಿಡ್ ಭೀತಿಯ ನಡುವೆಯೂ ಸಮಾರಂಭದಲ್ಲಿ ನೂರಾರು ಮಂದಿಯನ್ನು ಸೇರಿಸಲಾಗಿತ್ತು. ಮಾಸ್ಕ್ ಧರಿಸುವುದು ಮೊದಲಾದ ಮಾರ್ಗಸೂಚಿ ಪಾಲನೆ ಕಂಡುಬರಲಿಲ್ಲ.</p>.<p><strong>ಯಾವ್ಯಾವ ಕಾಮಗಾರಿ?</strong></p>.<p>* ಬೆಳಗಾವಿ- ಸಂಕೇಶ್ವರ ಆರು ಪಥದ ಬೈಪಾಸ್ (40 ಕಿ.ಮೀ.)</p>.<p>* ಸಂಕೇಶ್ವರ ಬೈಪಾಸ್–ಮಹಾರಾಷ್ಟ್ರ ಗಡಿಯವರೆಗೆ ಆರು ಪಥ (38 ಕಿ.ಮೀ.)</p>.<p>* ಚೋರ್ಲಾ- ಜಾಂಬೋಟಿ- ಬೆಳಗಾವಿ ದ್ವಿಪಥ (70 ಕಿ.ಮೀ.)</p>.<p>* ವಿಜಯಪುರ- ಅಥಣಿ- ಮುರಗುಂಡಿ ದ್ವಿಪಥ (80 ಕಿ.ಮೀ.)</p>.<p>* ಸಿದ್ದಾಪುರ– ವಿಜಯಪುರ ದ್ವಿಪಥ (12 ಕಿ.ಮೀ.)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ರಾಜ್ಯ ಸರ್ಕಾರವು ತ್ವರಿತವಾಗಿ ಭೂಸ್ವಾಧೀನ ಮಾಡಿಕೊಟ್ಟರೆ, ಅಗತ್ಯ ಅನುಮತಿ ಮೊದಲಾದವುಗಳಲ್ಲಿ ಸಹಕರಿಸಿದರೆ 2024ರ ವೇಳೆಗೆ ಕರ್ನಾಟಕದಲ್ಲೂ ಅಮೆರಿಕಕ್ಕೆ ಸರಿಸಮನಾಗಿ ಹೆದ್ದಾರಿಗಳನ್ನು ನಿರ್ಮಿಸಿಕೊಡಲಾಗುವುದು’ ಎಂದು ಕೇಂದ್ರ ಭೂಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದರು.</p>.<p>ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಗಳ ವ್ಯಾಪ್ತಿಯಲ್ಲಿ ₹ 3,972 ಕೋಟಿ ಮೊತ್ತದಲ್ಲಿ ಕೈಗೊಂಡಿರುವ ವಿವಿಧ 5 ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.</p>.<p><strong>ಇನ್ನಷ್ಟು ಯೋಜನೆ ಸೇರ್ಪಡೆ</strong></p>.<p>‘ಪ್ರತಿ ಕ್ಷೇತ್ರದ ಅಭಿವೃದ್ಧಿಯೂ ರಸ್ತೆ ಸಂಪರ್ಕವನ್ನು ಅವಲಂಬಿಸಿದೆ. ಆದ್ದರಿಂದ ರಸ್ತೆ ಸಂಪರ್ಕ ಜಾಲ ಸದೃಢಗೊಳಿಸಲು ಸರ್ಕಾರ ಬದ್ಧವಾಗಿದೆ. ಭಾರತಮಾಲಾ-2 ಯೋಜನೆಯಲ್ಲಿ ಈ ಭಾಗದ ಇನ್ನಷ್ಟು ಹೆದ್ದಾರಿ ಯೋಜನೆಗಳನ್ನು ಸೇರಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>‘9ಸಾವಿರ ಕಿ.ಮೀ. ಉದ್ದದ ಗ್ರೀನ್ಫೀಲ್ಡ್ ಹಾಗೂ ಹೆದ್ದಾರಿ ಕಾರಿಡಾರ್ ಯೋಜನೆಯನ್ನು 3 ಲಕ್ಷ ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಜಾರಿಗೊಳಿಸಲಾಗುತ್ತಿದೆ. ಇದರಲ್ಲಿ ಬೆಂಗಳೂರು-ಚೆನೈ ಯೋಜನೆ ಕೂಡ ಸೇರಿದೆ. ದೆಹಲಿ-ಮುಂಬೈ ಹೆದ್ದಾರಿಯಲ್ಲಿ 120 ಕಿ.ಮೀ.ವೇಗದಲ್ಲಿ ವಾಹನ ಚಲಾಯಿಸಬಹುದು. ಇದರಿಂದ ಎರಡು ನಗರಗಳ ನಡುವಿನ ಪ್ರಯಾಣ ಅವಧಿ 12 ಗಂಟೆಗೆ ಇಳಿಕೆಯಾಗಲಿದೆ’ ಎಂದು ತಿಳಿಸಿದರು.</p>.<p>‘ಬೆಂಗಳೂರಿನ ಸಂಚಾರ ದಟ್ಟಣೆ ಹಾಗೂ ನಗರೀಕರಣದ ಒತ್ತಡ ನಿಯಂತ್ರಿಸುವ ದೃಷ್ಟಿಯಿಂದ ಹೆದ್ದಾರಿಗಳ ಪಕ್ಕದಲ್ಲಿ ಭೂಸ್ವಾಧೀನ ಮಾಡಿಕೊಂಡು ಸ್ಮಾರ್ಟ್ ವಿಲೇಜ್ ಹಾಗೂ ಕೈಗಾರಿಕೆ ಸ್ಥಾಪಿಸುವ ಮೂಲಕ ಪರ್ಯಾಯ ಮಾರ್ಗ ಕಂಡುಕೊಳ್ಳಬಹುದು. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಯೋಜನೆ ರೂಪಿಸಿದರೆ ಕೇಂದ್ರದಿಂದ ಎಲ್ಲ ರೀತಿಯ ನೆರವನ್ನೂ ಕೊಡಲಾಗುವುದು’ ಎಂದು ಹೇಳಿದರು.</p>.<p><strong>ಬೆಳವಡಿ ಮಲ್ಲಮ್ಮ ಸ್ಮರಣೆ</strong></p>.<p>‘ರಾಜ್ಯ ಸರ್ಕಾರವು ರಸ್ತೆ ಯೋಜನೆಗಳಿಗೆ ಭೂಸ್ವಾಧೀನ ಮಾಡಿಕೊಟ್ಟರೆ ಪ್ರವಾಸೋದ್ಯಮ ಹಾಗೂ ಕೈಗಾರಿಕೆಗಳ ಅಭಿವೃದ್ಧಿಗೆ ಪೂರಕ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುವುದು’ ಎಂದರು.</p>.<p>‘ಭಾರತ ಮಾಲಾ-2 ಯೋಜನೆಯಲ್ಲಿ ಪುಣೆ-ಬೆಂಗಳೂರು ರಸ್ತೆಯ ಈಗಿನ ಅಂತರವನ್ನು 100 ಕಿ.ಮೀ. ಕಡಿಮೆಗೊಳಿಸುವ ಯೋಜನೆ ರೂಪಿಸಲಾಗಿದೆ. ಮುಂದೆ ಇದು ಬೆಂಗಳೂರು-ಚೆನೈ ಹೆದ್ದಾರಿಗೆ ಸಂಪರ್ಕ ಕಲ್ಪಿಸಲಿದೆ’ ಎಂದು ವಿವರಿಸಿದರು.</p>.<p>‘ಈಗ ಶಂಕುಸ್ಥಾಪನೆ ನೆರವೇರಿಸಿರುವ ರಾಷ್ಟ್ರೀಯ ಹೆದ್ದಾರಿಗಳಿಂದ ಈ ಭಾಗದ ರಸ್ತೆ ಸಂಪರ್ಕ ಮತ್ತಷ್ಟು ಸುಧಾರಿಸಲಿದೆ. ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ರಸ್ತೆ ಸಂಪರ್ಕವನ್ನು ಉತ್ತಮಪಡಿಸಲಿವೆ. ಇದರಿಂದ ಕಬ್ಬು ಸಾಗಣೆ, ಕೈಗಾರಿಕೆಗಳಿಗೆ ಅನುಕೂಲವಾಗಲಿದೆ’ ಎಂದರು.</p>.<p>‘ರಾಣಿ ಬೆಳವಡಿ ಮಲ್ಲಮ್ಮ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ನಡುವಿನ ಸಂಬಂಧವು ಮರಾಠಾ-ಕನ್ನಡಿಗರ ಸಹೋದರತ್ವಕ್ಕೆ ಸಾಕ್ಷಿಯಾಗಿದೆ’ ಎಂದು ಗಡ್ಕರಿ ಬಣ್ಣಿಸಿದರು.</p>.<p><strong>ಜಲಶಕ್ತಿ ಯೋಜನೆ</strong></p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ‘ಕಿತ್ತೂರಿನಿಂದ ಬೆಳಗಾವಿ ಮೂಲಕ ಮಹಾರಾಷ್ಟ್ರ ಗಡಿಯವರೆಗಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸಂಪೂರ್ಣವಾಗಿ ಜಲಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಬೆಳಗಾವಿ ಜಿಲ್ಲೆಯಿಂದ ಆರಂಭಿಸಲಾಗುವ ಈ ಯೋಜನೆಯನ್ನು ಮುಂಬರುವ ದಿನಗಳಲ್ಲಿ ರಾಜ್ಯದಾದ್ಯಂತ ಅನುಷ್ಢಾನಗೊಳಿಸಲಾಗುವುದು. ಆ ಭಾಗದಲ್ಲಿ ಲಭ್ಯವಿರುವ ನೀರನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು’ ಎಂದು ಘೋಷಿಸಿದರು.</p>.<p>‘ರಾಜ್ಯದ ಎಲ್ಲ ಹೆದ್ದಾರಿ ಪಕ್ಕದಲ್ಲಿ ಜಲಶಕ್ತಿ ಯೋಜನೆ ಜಾರಿಗೊಳಿಸುವ ಮೂಲಕ ಅಭಿವೃದ್ಧಿಗೆ ಹೊಸ ಆಯಾಮ ಒದಗಿಸಲಾಗುವುದು’ ಎಂದು ತಿಳಿಸಿದರು.</p>.<p>‘ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧೆಡೆ ವರ್ತುಲ ರಸ್ತೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು’ ಎಂದು ಕೇಂದ್ರ ಸಚಿವರನ್ನು ಕೋರಿದರು.</p>.<p>ಕೋವಿಡ್ ಭೀತಿಯ ನಡುವೆಯೂ ಸಮಾರಂಭದಲ್ಲಿ ನೂರಾರು ಮಂದಿಯನ್ನು ಸೇರಿಸಲಾಗಿತ್ತು. ಮಾಸ್ಕ್ ಧರಿಸುವುದು ಮೊದಲಾದ ಮಾರ್ಗಸೂಚಿ ಪಾಲನೆ ಕಂಡುಬರಲಿಲ್ಲ.</p>.<p><strong>ಯಾವ್ಯಾವ ಕಾಮಗಾರಿ?</strong></p>.<p>* ಬೆಳಗಾವಿ- ಸಂಕೇಶ್ವರ ಆರು ಪಥದ ಬೈಪಾಸ್ (40 ಕಿ.ಮೀ.)</p>.<p>* ಸಂಕೇಶ್ವರ ಬೈಪಾಸ್–ಮಹಾರಾಷ್ಟ್ರ ಗಡಿಯವರೆಗೆ ಆರು ಪಥ (38 ಕಿ.ಮೀ.)</p>.<p>* ಚೋರ್ಲಾ- ಜಾಂಬೋಟಿ- ಬೆಳಗಾವಿ ದ್ವಿಪಥ (70 ಕಿ.ಮೀ.)</p>.<p>* ವಿಜಯಪುರ- ಅಥಣಿ- ಮುರಗುಂಡಿ ದ್ವಿಪಥ (80 ಕಿ.ಮೀ.)</p>.<p>* ಸಿದ್ದಾಪುರ– ವಿಜಯಪುರ ದ್ವಿಪಥ (12 ಕಿ.ಮೀ.)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>