ಈ ಬಗ್ಗೆ ಇಲಾಖೆಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದೆ. ಕಳೆದ ವರ್ಷ 1,35,935 ಕರುಳುಬೇನೆ ಪ್ರಕರಣಗಳು, 47,137 ವಿಷಮಶೀತ ಜ್ವರ ಪ್ರಕರಣಗಳು ಹಾಗೂ 3,917 ಯಕೃತ್ತಿನ ಉರಿಯೂತ (ಹೆಪಟೈಟಿಸ್) ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದವು. ಬೇಸಿಗೆಯಲ್ಲಿ ವಾಂತಿ ಭೇದಿ, ಕಾಮಾಲೆ, ಕರುಳುಬೇನೆ, ಇಲಿಜ್ವರ ಒಳಗೊಂಡಂತೆ ವಿವಿಧಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಹೀಗಾಗಿ, ರೋಗಗಳ ಹರಡುವಿಕೆ ತಡೆಗೆ ಕುಡಿಯುವ ನೀರು ಪರಿಶೀಲನೆ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಲಾಗಿದೆ.