ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರು ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಮುಂದುವರಿಕೆ

Last Updated 15 ಅಕ್ಟೋಬರ್ 2020, 4:36 IST
ಅಕ್ಷರ ಗಾತ್ರ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮುಂಗಾರು ಚುರುಕುಗೊಂಡಿದೆ.

ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಗ
ಳಲ್ಲಿ ಧಾರಾಕಾರ ಮಳೆಯ ಮುನ್ಸೂಚನೆ ಇರುವುದರಿಂದ ಅ.15ರವರೆಗೆ ‘ರೆಡ್ ಅಲರ್ಟ್’ ಮುಂದುವರಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಕಲಬುರ್ಗಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಬೀದರ್, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಹಾಸನ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಕರಾವಳಿಯಲ್ಲಿ ಅ.16ರವರೆಗೆ ಹೆಚ್ಚು ಮಳೆಯಾಗಲಿದೆ. ಈ ಭಾಗದಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT