‘ಸಾಂವಿಧಾನಿಕ ಹುದ್ದೆಯಾದ ವಿಧಾನಸಭಾ ಅಧ್ಯಕ್ಷ ಸ್ಥಾನ ಮತ್ತು ವಿಧಾನ ಪರಿಷತ್ ಸಭಾಪತಿ ಹುದ್ದೆ ಇದುವರೆಗೂ ಕುರುಬ ಸಮಾಜದ ಮುಖಂಡರಿಗೆ ಲಭಿಸಿಲ್ಲ. ಹೀಗಾಗಿ, ಪ್ರಸ್ತುತ ವಿಧಾನ ಪರಿಷತ್ತಿನ ಹಂಗಾಮಿ ಸಭಾಪತಿಯಾಗಿರುವ ರಘುನಾಥರಾವ್ ಮಲ್ಕಾಪುರೆ ಅವರನ್ನೇ ಮುಂದುವರಿಸಬೇಕು’ ಎಂದು ಟ್ರಸ್ಟ್ ಅಧ್ಯಕ್ಷ ಟಿ.ಬಿ. ಬಳಗಾವಿ ಮತ್ತು ಹಿಂದುಳಿದ ದಲಿತ ಸಮುದಾಯಗಳ ಒಕ್ಕೂಟದ (ಹಿಂದ) ಅಧ್ಯಕ್ಷ ಕೆ. ಮುಕುಡಪ್ಪ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.