ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರು ತಿಂಗಳ ಹಿಂದೆ ಕಮಿಷನ್ ಕುರಿತಾಗಿ ನಾವು ಪ್ರಧಾನಿಗೆ ಪತ್ರ ಬರೆದಿದ್ದೆವು. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ಭೇಟಿಗೆ ನಾಲ್ಕು ಬಾರಿ ಸಮಯ ಕೇಳಿದ್ದೆವು. ಅವರು ಸಮಯ ಕೊಡಲಿಲ್ಲ. ಹೀಗಾಗಿ ಅನಿವಾರ್ಯವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇವು. ಪ್ರಧಾನಿ ಕಚೇರಿಯಿಂದ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’ ಎಂದರು.