<p><strong>ಧಾರವಾಡ</strong>: ‘ಸರ್ಕಾರದ ವಿವಿಧ ಇಲಾಖೆಗಳ ಮೂಲಕ ನಡೆಸಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ಸರ್ಕಾರ ₹6 ಸಾವಿರ ಕೋಟಿ ಬಾಕಿ ಉಳಿಸಿಕೊಂಡಿದೆ. ಇದರಲ್ಲಿ ಉತ್ತರ ಕರ್ನಾಟಕದ ಗುತ್ತಿಗೆದಾರರ ಪಾಲು ₹3 ಸಾವಿರ ಕೋಟಿಯಾಗಿದ್ದು, ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಉತ್ತರ ಕರ್ನಾಟಕ ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುಭಾಸ ಪಾಟೀಲ ಆಗ್ರಹಿಸಿದರು.</p>.<p>‘ಸಣ್ಣ ನೀರಾವರಿ, ಲೋಕೋಪಯೋಗಿ, ಬೃಹತ್ ನೀರಾವರಿ, ಜಿಲ್ಲಾ ಪಂಚಾಯ್ತಿ ಹೀಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆದಾರರ ಹಣ ಕೋಟಿಗಟ್ಟಲೇ ಬಾಕಿ ಇದ್ದು, ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>'ಗುತ್ತಿಗೆದಾರರು ಟೆಂಡರ್ಗಳಲ್ಲಿ ಸರ್ಕಾರ ನಿಗದಿಪಡಿಸಿದ ಎಸ್ಆರ್ ದರಕ್ಕಿಂತ ಶೇ 5ಕ್ಕಿಂತ ಹೆಚ್ಚಿನ ದರಗಳನ್ನು ನಮೂದಿಸಿದಲ್ಲಿ ಅದನ್ನು ಸರ್ಕಾರಕ್ಕೆ ಕಳುಹಿಸುವ ನಿಯಮವಿದೆ. ಈ ನಿಯಮ ಬದಲಿಸಿ ಮೊದಲಿನ ನಿಯಮ ಜಾರಿಗೆ ತರಬೇಕು. ಇಂತಹ ಚಿಕ್ಕಪುಟ್ಟ ಬದಲಾವಣೆ ಮಾಡಲು ವಲಯ ಕಾರ್ಯನಿರ್ವಾಹಕ ಎಂಜಿನಿಯರ್ ಮಟ್ಟದಲ್ಲೇ ಕ್ರಮ ಕೈಗೊಳ್ಳುವಂತೆ ಅಧಿಕಾರವನ್ನು ವಿಕೇಂದ್ರೀಕರಿಸಬೇಕು’ ಎಂದು ಪಾಟೀಲ ಒತ್ತಾಯಿಸಿದರು.</p>.<p>‘ರಾಜ್ಯದಾದ್ಯಂತ ಕ್ರಷರ್ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದು, ಅವರ ಸಮಸ್ಯೆಯನ್ನು ಸರ್ಕಾರ ಬಗೆಹರಿಸಬೇಕು. ವಿವಿಧ ಕಾಮಗಾರಿಗಳಿಗೆ ಅಗತ್ಯವಿರುವ ಜಲ್ಲಿಕಲ್ಲು ಸಿಗುವಂತೆ ಮಾಡಬೇಕು. ಒಂದು ವಾರದೊಳಗೆ ಬೇಡಿಕೆ ಈಡೇರದಿದ್ದರೆ ಜನಪ್ರತಿನಿಧಿಗಳ ಮನೆ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ಸರ್ಕಾರದ ವಿವಿಧ ಇಲಾಖೆಗಳ ಮೂಲಕ ನಡೆಸಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ಸರ್ಕಾರ ₹6 ಸಾವಿರ ಕೋಟಿ ಬಾಕಿ ಉಳಿಸಿಕೊಂಡಿದೆ. ಇದರಲ್ಲಿ ಉತ್ತರ ಕರ್ನಾಟಕದ ಗುತ್ತಿಗೆದಾರರ ಪಾಲು ₹3 ಸಾವಿರ ಕೋಟಿಯಾಗಿದ್ದು, ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಉತ್ತರ ಕರ್ನಾಟಕ ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುಭಾಸ ಪಾಟೀಲ ಆಗ್ರಹಿಸಿದರು.</p>.<p>‘ಸಣ್ಣ ನೀರಾವರಿ, ಲೋಕೋಪಯೋಗಿ, ಬೃಹತ್ ನೀರಾವರಿ, ಜಿಲ್ಲಾ ಪಂಚಾಯ್ತಿ ಹೀಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆದಾರರ ಹಣ ಕೋಟಿಗಟ್ಟಲೇ ಬಾಕಿ ಇದ್ದು, ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>'ಗುತ್ತಿಗೆದಾರರು ಟೆಂಡರ್ಗಳಲ್ಲಿ ಸರ್ಕಾರ ನಿಗದಿಪಡಿಸಿದ ಎಸ್ಆರ್ ದರಕ್ಕಿಂತ ಶೇ 5ಕ್ಕಿಂತ ಹೆಚ್ಚಿನ ದರಗಳನ್ನು ನಮೂದಿಸಿದಲ್ಲಿ ಅದನ್ನು ಸರ್ಕಾರಕ್ಕೆ ಕಳುಹಿಸುವ ನಿಯಮವಿದೆ. ಈ ನಿಯಮ ಬದಲಿಸಿ ಮೊದಲಿನ ನಿಯಮ ಜಾರಿಗೆ ತರಬೇಕು. ಇಂತಹ ಚಿಕ್ಕಪುಟ್ಟ ಬದಲಾವಣೆ ಮಾಡಲು ವಲಯ ಕಾರ್ಯನಿರ್ವಾಹಕ ಎಂಜಿನಿಯರ್ ಮಟ್ಟದಲ್ಲೇ ಕ್ರಮ ಕೈಗೊಳ್ಳುವಂತೆ ಅಧಿಕಾರವನ್ನು ವಿಕೇಂದ್ರೀಕರಿಸಬೇಕು’ ಎಂದು ಪಾಟೀಲ ಒತ್ತಾಯಿಸಿದರು.</p>.<p>‘ರಾಜ್ಯದಾದ್ಯಂತ ಕ್ರಷರ್ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದು, ಅವರ ಸಮಸ್ಯೆಯನ್ನು ಸರ್ಕಾರ ಬಗೆಹರಿಸಬೇಕು. ವಿವಿಧ ಕಾಮಗಾರಿಗಳಿಗೆ ಅಗತ್ಯವಿರುವ ಜಲ್ಲಿಕಲ್ಲು ಸಿಗುವಂತೆ ಮಾಡಬೇಕು. ಒಂದು ವಾರದೊಳಗೆ ಬೇಡಿಕೆ ಈಡೇರದಿದ್ದರೆ ಜನಪ್ರತಿನಿಧಿಗಳ ಮನೆ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>