ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಕೊಡುಗೆ: ಬಸವರಾಜ ಬೊಮ್ಮಾಯಿ‌

ಉಣಕಲ್ಲದ ಸಿದ್ದಪ್ಪಜನವರ ಮೂಲ ಗದ್ದುಗೆಯ ಮಠಕ್ಕೆ ಭೇಟಿ
Last Updated 15 ಜನವರಿ 2023, 4:10 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಈ ಬಾರಿಯ ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ನಗರದ ಉಣಕಲ್ಲದ ಸಿದ್ದಪ್ಪಜನವರ ಜಾತ್ರೆ ಅಂಗವಾಗಿ ಮೂಲ ಗದ್ದುಗೆಯ ಮಠಕ್ಕೆ ಭಾನುವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಸಿದ್ಧಪಡಿಸುವ ಕುರಿತು ವಿವಿಧ ಇಲಾಖೆಗಳ ಜೊತೆ ಚರ್ಚೆ ನಡೆಸಲಾಗುತ್ತಿದೆ. ರಾಜ್ಯಕ್ಕೆ ಅತ್ಯುತ್ತಮ ಬಜೆಟ್ ನೀಡಲಾಗುವುದು ಎಂದರು.

ಚಿಕ್ಕಂದಿನಿಂದಲೂ ನಾನ ಸಿದ್ದಪ್ಪಜ್ಜನ ದೇವಸ್ಥಾನಕ್ಕೆ ಬರುತ್ತಿದೆ. ಇವತ್ತು ಜಾತ್ರೆ ಇರುವ ಹಿನ್ನೆಲೆಯಲ್ಲಿ ಅಜ್ಜನ ದರ್ಶನ ಪಡೆದು, ಪೂಜೆ ಸಲ್ಲಿಸಿದ್ದೇನೆ ಎಂದು ತಿಳಿಸಿದರು.

ಮಹಾನಗರ‌ ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ತಿಪ್ಪಣ್ಣ ಮಜ್ಜಗಿ, ಉಮೇಶಗೌಡ ಕೌಜಗೇರಿ ಹಾಗೂ ಸ್ಥಳೀಯ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT