ಈ ಸಂಬಂಧ ಜುನೈದ್ ಎಂಬುವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಕರ್ನಾಟಕ ಭೂ ಕಂದಾಯ ಕಾಯ್ದೆ-1964ರ ಕಲಂ 95ರ ಅನುಸಾರ ಕೃಷಿ ಜಮೀನು ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿದ್ದರೆ, ಅಂತಹ ಜಮೀನನ್ನು ಯಾವ ಉದ್ದೇಶಕ್ಕೆ ಗೊತ್ತುಪಡಿಸಲಾಗಿದೆಯೋ, ಅದಕ್ಕಾಗಿ ಪರಿವರ್ತಿಸಲು ಕೋರಿದರೆ ದಂಡ ಪಾವತಿಯ ಷರತ್ತಿಗೆ ಒಳಪಟ್ಟು ಅನುಮತಿ ನೀಡ ಬೇಕಾಗುತ್ತದೆ’ ಎಂದು ಹೈಕೋರ್ಟ್ ತಿಳಿಸಿದೆ.