<p><strong>ಚಿಕ್ಕಮಗಳೂರು/ಬಸವಕಲ್ಯಾಣ/ಶಿವಮೊಗ್ಗ:</strong>ಬಾಳೆಹೊನ್ನೂರಿನ ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಮಂಗಳವಾರ ಕೋವಿಡ್ ದೃಢಪಟ್ಟಿದ್ದು, ಚಿಕಿತ್ಸೆಗೆ ಬೆಂಗಳೂರಿಗೆ ತೆರಳಿದ್ದಾರೆ.</p>.<p>ಸ್ವಾಮೀಜಿಗೆ ಸೋಮವಾರ ಜ್ವರ ಕಾಣಿಸಿಕೊಂಡಿತ್ತು. ಪಟ್ಟಣದ ಆರೋಗ್ಯ ಕೇಂದ್ರದ ವೈದ್ಯರು ಮಂಗಳವಾರ ಮಾದರಿ ಪರೀಕ್ಷೆ ಮಾಡಿದ್ದು, ಕೊರೊನಾ ಸೋಂಕು ಖಾತರಿಯಾಗಿದೆ.</p>.<p>‘ಜ್ವರಕ್ಕೆ ಚಿಕಿತ್ಸೆ ಪಡೆದಿದ್ದು ಕಡಿಮೆಯಾಗಿದೆ. ಲಕ್ಷಣಗಳು ಇಲ್ಲ, ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದು, ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗುತ್ತೇನೆ’ ಎಂದು ರಂಭಾಪುರಿಶ್ರೀ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಈಶ್ವರಪ್ಪಗೆ ಕೋವಿಡ್</strong></p>.<p>ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕೊರೊನಾ ಸೋಂಕು ಇರುವುದು ಮಂಗಳವಾರ ಪತ್ತೆಯಾಗಿದೆ.</p>.<p>ಸೋಮವಾರ ರಾತ್ರಿ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಿದ್ದರು. ಶೀತ ಕಾಣಿಸಿಕೊಂಡ ಕಾರಣ ಗಂಟಲುದ್ರವ ಪರೀಕ್ಷೆಗೆ ಕಳುಹಿಸಿದ್ದರು. ವರದಿ ಪಾಸಿಟಿವ್ ಬಂದ ತಕ್ಷಣ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<p>‘ನನಗೆ ಸೋಂಕು ಇರುವುದು ದೃಢಪಟ್ಟಿದೆ. ಯಾವುದೇ ರೀತಿಯ ಆರೋಗ್ಯದ ಸಮಸ್ಯೆ ಇಲ್ಲ. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿರುವೆ. ಎಲ್ಲರ ಹಾರೈಕೆಯಿಂದ ಶೀಘ್ರ ಗುಣಮುಖನಾಗುವೆ’ ಎಂದು ಈಶ್ವರಪ್ಪ ಪ್ರತಿಕ್ರಿಯಿಸಿದರು.</p>.<p>ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕೊರೊನಾ ಸೋಂಕು ಇರುವುದು ಮಂಗಳವಾರ ಪತ್ತೆಯಾಗಿದೆ. ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<p><strong>ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್ಗೆಕೋವಿಡ್ </strong></p>.<p>ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್ಗೆ ಕೋವಿಡ್ ದೃಢಪಟ್ಟಿದೆ. ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡಿತ್ತು. ಆದ್ದರಿಂದ ಪರೀಕ್ಷೆಗೊಳಗಾಗಿದ್ದರು. ವರದಿ ಪಾಸಿಟಿವ್ ಬಂದಿದೆ. ಕೆಲ ದಿನಗಳಿಂದ ಸಂಪರ್ಕದಲ್ಲಿದ್ದವರು ಜಾಗರೂಕರಾಗಿರಬೇಕು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು/ಬಸವಕಲ್ಯಾಣ/ಶಿವಮೊಗ್ಗ:</strong>ಬಾಳೆಹೊನ್ನೂರಿನ ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಮಂಗಳವಾರ ಕೋವಿಡ್ ದೃಢಪಟ್ಟಿದ್ದು, ಚಿಕಿತ್ಸೆಗೆ ಬೆಂಗಳೂರಿಗೆ ತೆರಳಿದ್ದಾರೆ.</p>.<p>ಸ್ವಾಮೀಜಿಗೆ ಸೋಮವಾರ ಜ್ವರ ಕಾಣಿಸಿಕೊಂಡಿತ್ತು. ಪಟ್ಟಣದ ಆರೋಗ್ಯ ಕೇಂದ್ರದ ವೈದ್ಯರು ಮಂಗಳವಾರ ಮಾದರಿ ಪರೀಕ್ಷೆ ಮಾಡಿದ್ದು, ಕೊರೊನಾ ಸೋಂಕು ಖಾತರಿಯಾಗಿದೆ.</p>.<p>‘ಜ್ವರಕ್ಕೆ ಚಿಕಿತ್ಸೆ ಪಡೆದಿದ್ದು ಕಡಿಮೆಯಾಗಿದೆ. ಲಕ್ಷಣಗಳು ಇಲ್ಲ, ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದು, ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗುತ್ತೇನೆ’ ಎಂದು ರಂಭಾಪುರಿಶ್ರೀ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಈಶ್ವರಪ್ಪಗೆ ಕೋವಿಡ್</strong></p>.<p>ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕೊರೊನಾ ಸೋಂಕು ಇರುವುದು ಮಂಗಳವಾರ ಪತ್ತೆಯಾಗಿದೆ.</p>.<p>ಸೋಮವಾರ ರಾತ್ರಿ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಿದ್ದರು. ಶೀತ ಕಾಣಿಸಿಕೊಂಡ ಕಾರಣ ಗಂಟಲುದ್ರವ ಪರೀಕ್ಷೆಗೆ ಕಳುಹಿಸಿದ್ದರು. ವರದಿ ಪಾಸಿಟಿವ್ ಬಂದ ತಕ್ಷಣ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<p>‘ನನಗೆ ಸೋಂಕು ಇರುವುದು ದೃಢಪಟ್ಟಿದೆ. ಯಾವುದೇ ರೀತಿಯ ಆರೋಗ್ಯದ ಸಮಸ್ಯೆ ಇಲ್ಲ. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿರುವೆ. ಎಲ್ಲರ ಹಾರೈಕೆಯಿಂದ ಶೀಘ್ರ ಗುಣಮುಖನಾಗುವೆ’ ಎಂದು ಈಶ್ವರಪ್ಪ ಪ್ರತಿಕ್ರಿಯಿಸಿದರು.</p>.<p>ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕೊರೊನಾ ಸೋಂಕು ಇರುವುದು ಮಂಗಳವಾರ ಪತ್ತೆಯಾಗಿದೆ. ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<p><strong>ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್ಗೆಕೋವಿಡ್ </strong></p>.<p>ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್ಗೆ ಕೋವಿಡ್ ದೃಢಪಟ್ಟಿದೆ. ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡಿತ್ತು. ಆದ್ದರಿಂದ ಪರೀಕ್ಷೆಗೊಳಗಾಗಿದ್ದರು. ವರದಿ ಪಾಸಿಟಿವ್ ಬಂದಿದೆ. ಕೆಲ ದಿನಗಳಿಂದ ಸಂಪರ್ಕದಲ್ಲಿದ್ದವರು ಜಾಗರೂಕರಾಗಿರಬೇಕು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>