<p><strong>ಮಂಗಳೂರು: </strong>ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕು ಸೀಗೊಡಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 103ಕ್ಕೆ ಏರಿದೆ. ಇದರ ಜತೆಯಲ್ಲೇ ಮಂಗಳೂರಿನ ಡಾ. ಎಂ.ವಿ. ಶೆಟ್ಟಿ ಅರೆವೈದ್ಯಕೀಯ ಕಾಲೇಜಿನಲ್ಲೂ 9 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ.</p>.<p>ಜವಾಹರ್ ನವೋದಯ ವಿದ್ಯಾಲಯದಲ್ಲಿ ಸೋಮವಾರ ಇನ್ನೂ 34 ಮಂದಿಗೆ ಕೋವಿಡ್ ದೃಢಪಟ್ಟಿದೆ. 448 ಮಂದಿಯ ಮಾದರಿ ಪರೀಕ್ಷೆ ನಡೆದಿತ್ತು. ಈವರೆಗೆ 92 ವಿದ್ಯಾರ್ಥಿಗಳು, 9 ಶಿಕ್ಷಕರು ಹಾಗೂ ಇಬ್ಬರು ಪೋಷಕರು ಸೇರಿ 103 ಮಂದಿಗೆ ಸೋಂಕು ದೃಢಪಟ್ಟಿದೆ.</p>.<p>‘ಎಲ್ಲ 103 ಮಂದಿ ಮಾದರಿಯನ್ನು ‘ಜಿನೋಮ್ ಸಿಕ್ವೆನ್ಸ್’ ಪರೀಕ್ಷೆಗೆ ಬೆಂಗಳೂರಿಗೆ ಕಳುಹಿಸಿದ್ದು, ವರದಿ ನಿರೀಕ್ಷಿಸಲಾಗಿದೆ’ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ತಿಳಿಸಿದರು.</p>.<p>‘ಸಿಬ್ಬಂದಿಗೆ ವಸತಿ ಗೃಹದಲ್ಲಿ, ವಿದ್ಯಾರ್ಥಿಗಳಿಗೆ ವಿದ್ಯಾಲಯದ ವಿವಿಧ ಬ್ಲಾಕ್ಗಳಲ್ಲಿ ಪ್ರತ್ಯೇಕ ವಾಸದ ವ್ಯವಸ್ಥೆ ಮಾಡಲಾಗಿದೆ. ಸೋಂಕು ದೃಢಪಟ್ಟಿರುವ ಯಾರಿಗೂ ರೋಗಲಕ್ಷಣಗಳಿರಲಿಲ್ಲ‘ ಎಂದು ಮಾಹಿತಿ ನೀಡಿದರು.</p>.<p>ಮಂಗಳೂರಿನ ಎಂ.ವಿ. ಶೆಟ್ಟಿ ಅರೆವೈದ್ಯಕೀಯ ಕಾಲೇಜಿನಲ್ಲಿ 173 ಮಂದಿಯ ಗಂಟಲುದ್ರವ ಪರೀಕ್ಷೆ ಮಾಡಿದ್ದು, ಅವರಲ್ಲಿ ಭಾನುವಾರ 7 ಮಂದಿಗೆ ಹಾಗೂ ಸೋಮವಾರ ಇಬ್ಬರಿಗೆ ಕೋವಿಡ್<br />ದೃಢಪಟ್ಟಿದೆ.</p>.<p>‘ಬಾಲಕರು ಮತ್ತು ಬಾಲಕಿಯರ ಹಾಸ್ಟೆಲ್ ಅನ್ನು ಕಂಟೈನ್ಮೆಂಟ್ ಪ್ರದೇಶ ಎಂದು ಘೋಷಿಸಲಾಗಿದೆ. ಮಾದರಿಗಳನ್ನು ಜಿನೋಮ್ ಸಿಕ್ವೆನ್ಸ್ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕು ಸೀಗೊಡಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 103ಕ್ಕೆ ಏರಿದೆ. ಇದರ ಜತೆಯಲ್ಲೇ ಮಂಗಳೂರಿನ ಡಾ. ಎಂ.ವಿ. ಶೆಟ್ಟಿ ಅರೆವೈದ್ಯಕೀಯ ಕಾಲೇಜಿನಲ್ಲೂ 9 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ.</p>.<p>ಜವಾಹರ್ ನವೋದಯ ವಿದ್ಯಾಲಯದಲ್ಲಿ ಸೋಮವಾರ ಇನ್ನೂ 34 ಮಂದಿಗೆ ಕೋವಿಡ್ ದೃಢಪಟ್ಟಿದೆ. 448 ಮಂದಿಯ ಮಾದರಿ ಪರೀಕ್ಷೆ ನಡೆದಿತ್ತು. ಈವರೆಗೆ 92 ವಿದ್ಯಾರ್ಥಿಗಳು, 9 ಶಿಕ್ಷಕರು ಹಾಗೂ ಇಬ್ಬರು ಪೋಷಕರು ಸೇರಿ 103 ಮಂದಿಗೆ ಸೋಂಕು ದೃಢಪಟ್ಟಿದೆ.</p>.<p>‘ಎಲ್ಲ 103 ಮಂದಿ ಮಾದರಿಯನ್ನು ‘ಜಿನೋಮ್ ಸಿಕ್ವೆನ್ಸ್’ ಪರೀಕ್ಷೆಗೆ ಬೆಂಗಳೂರಿಗೆ ಕಳುಹಿಸಿದ್ದು, ವರದಿ ನಿರೀಕ್ಷಿಸಲಾಗಿದೆ’ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ತಿಳಿಸಿದರು.</p>.<p>‘ಸಿಬ್ಬಂದಿಗೆ ವಸತಿ ಗೃಹದಲ್ಲಿ, ವಿದ್ಯಾರ್ಥಿಗಳಿಗೆ ವಿದ್ಯಾಲಯದ ವಿವಿಧ ಬ್ಲಾಕ್ಗಳಲ್ಲಿ ಪ್ರತ್ಯೇಕ ವಾಸದ ವ್ಯವಸ್ಥೆ ಮಾಡಲಾಗಿದೆ. ಸೋಂಕು ದೃಢಪಟ್ಟಿರುವ ಯಾರಿಗೂ ರೋಗಲಕ್ಷಣಗಳಿರಲಿಲ್ಲ‘ ಎಂದು ಮಾಹಿತಿ ನೀಡಿದರು.</p>.<p>ಮಂಗಳೂರಿನ ಎಂ.ವಿ. ಶೆಟ್ಟಿ ಅರೆವೈದ್ಯಕೀಯ ಕಾಲೇಜಿನಲ್ಲಿ 173 ಮಂದಿಯ ಗಂಟಲುದ್ರವ ಪರೀಕ್ಷೆ ಮಾಡಿದ್ದು, ಅವರಲ್ಲಿ ಭಾನುವಾರ 7 ಮಂದಿಗೆ ಹಾಗೂ ಸೋಮವಾರ ಇಬ್ಬರಿಗೆ ಕೋವಿಡ್<br />ದೃಢಪಟ್ಟಿದೆ.</p>.<p>‘ಬಾಲಕರು ಮತ್ತು ಬಾಲಕಿಯರ ಹಾಸ್ಟೆಲ್ ಅನ್ನು ಕಂಟೈನ್ಮೆಂಟ್ ಪ್ರದೇಶ ಎಂದು ಘೋಷಿಸಲಾಗಿದೆ. ಮಾದರಿಗಳನ್ನು ಜಿನೋಮ್ ಸಿಕ್ವೆನ್ಸ್ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>