ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 50 ಸಾವಿರ ದಾಟಿದ ಸಕ್ರಿಯ ಪ್ರಕರಣ

Last Updated 8 ಏಪ್ರಿಲ್ 2021, 16:49 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಸತತ ಮೂರನೇ ದಿನ ಕೂಡ ಆರು ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, 24 ಗಂಟೆಗಳ ಅವಧಿಯಲ್ಲಿ 6,570 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 53,395ಕ್ಕೆ ತಲುಪಿದೆ.

ಕಳೆದ ತಿಂಗಳು ರಾಜ್ಯದಲ್ಲಿ ಈ ವೇಳೆ ಕೇವಲ 6,815 ಸಕ್ರಿಯ ಪ್ರಕರಣಗಳಿದ್ದವು. ಬಳಿಕ ಹೊಸ ಪ್ರಕರಣಗಳು ಏರುಗತಿ ಪಡೆದುಕೊಂಡಿದ್ದು, ಈಗ ಕೇವಲ ಮೂರು ದಿನಗಳ ಅವಧಿಯಲ್ಲಿಯೇ 19,941 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿದ್ದು, 8 ಜಿಲ್ಲೆಗಳಲ್ಲಿ ಮೂರಂಕಿ ತಲುಪಿದೆ.

ಬೆಂಗಳೂರಿನಲ್ಲಿ 4,422 ಮಂದಿ ಸೋಂಕಿತರಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4.64 ಲಕ್ಷ ದಾಟಿದೆ. ಕಲಬುರ್ಗಿ (240), ಮೈಸೂರು (216), ತುಮಕೂರು (183), ದಕ್ಷಿಣ ಕನ್ನಡ (145), ಉತ್ತರ ಕನ್ನಡ (142), ಬೀದರ್ (129), ಬಳ್ಳಾರಿ (126) ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳು ವರದಿಯಾಗಿವೆ. ‌

ಸದ್ಯ ಸೋಂಕು ದೃಢ ಪ್ರಮಾಣ ಶೇ 6.04ಕ್ಕೆ ಏರಿಕೆಯಾಗಿದೆ. ಈವರೆಗೆ ಕೋವಿಡ್ ಪೀಡಿತರಾದವರ ಸಂಖ್ಯೆ 10.40 ಲಕ್ಷ ದಾಟಿದೆ. ಕೋವಿಡ್ ಪೀಡಿತರಲ್ಲಿ ಮತ್ತೆ 36 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 22 ಮಂದಿ, ಕಲಬುರ್ಗಿಯಲ್ಲಿ 3 ಮಂದಿ, ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ತಲಾ ಇಬ್ಬರು, ವಿಜಯಪುರ, ತುಮಕೂರು, ಮೈಸೂರು, ಕೋಲಾರ, ಧಾರವಾಡ, ಬೀದರ್ ಹಾಗೂ ಬೆಳಗಾವಿಯಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ಈವರೆಗೆ ಮೃತಪಟ್ಟವರ ಸಂಖ್ಯೆ 12,767ಕ್ಕೆ ತಲುಪಿದೆ.

ತೀವ್ರ ನಿಗಾ ಘಟಕಕ್ಕೆ ದಾಖಲಾಗುವವರ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಸದ್ಯ 357 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಂದು ದಿನದ ಅವಧಿಯಲ್ಲಿ 1.08 ಲಕ್ಷ ಮಂದಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಕೊರೊನಾ ಸೋಂಕಿತರಲ್ಲಿ 2,393 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 9.73 ಲಕ್ಷ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT