<p><strong>ಬೆಂಗಳೂರು:</strong> ಕರ್ನಾಟಕದಲ್ಲಿ ಬುಧವಾರ 24 ಗಂಟೆಗಳ ಅವಧಿಯಲ್ಲಿ ಕೋವಿಡ್–19 ದೃಢಪಟ್ಟ ಹೊಸ ಪ್ರಕರಣಗಳ ಸಂಖ್ಯೆ 50 ಸಾವಿರ ದಾಟಿದೆ. ಇದೇ ಅವಧಿಯಲ್ಲಿ ಸೋಂಕಿನಿಂದ 346 ಮಂದಿ ಮೃತಪಟ್ಟಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.</p>.<p>ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದ ಅಂತರದಲ್ಲಿ 50,112 ಪ್ರಕರಣಗಳು ದೃಢಪಟ್ಟಿವೆ. ಕೊರೊನಾ ವೈರಸ್ ಸೋಂಕಿನ ಖಚಿತ ಪ್ರಕರಣಗಳ ಪ್ರಮಾಣ ಶೇ 32.28ರಷ್ಟಾಗಿದೆ.</p>.<p>ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟ 23,106 ಪ್ರಕರಣಗಳು ವರದಿಯಾಗಿದ್ದು, 161 ಮಂದಿ ಸಾವಿಗೀಡಾಗಿದ್ದಾರೆ. 24 ಗಂಟೆಗಳಲ್ಲಿ 26,841 ಮಂದಿ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 4,87,288ಕ್ಕೆ ಏರಿಕೆಯಾಗಿದೆ.</p>.<p>ಮೈಸೂರಿನಲ್ಲಿ 2,790 ಪ್ರಕರಣಗಳು, ತುಮಕೂರಿನಲ್ಲಿ 2,335 ಪ್ರಕರಣಗಳು, ಉಡುಪಿಯಲ್ಲಿ 1,655 ಪ್ರಕರಣಗಳು, ಹಾಸನದಲ್ಲಿ 1,604 ಪ್ರಕರಣಗಳು, ಮಂಡ್ಯದಲ್ಲಿ 1,621 ಪ್ರಕರಣಗಳು ಹಾಗೂ ದಕ್ಷಿಣ ಕನ್ನಡದಲ್ಲಿ 1,529 ಪ್ರಕರಣಗಳು ದಾಖಲಾಗಿವೆ.</p>.<p>ರಾಜ್ಯದಲ್ಲಿ ಒಟ್ಟು 17.41 ಲಕ್ಷಕ್ಕೂ ಅಧಿಕ ಪ್ರರಕಣಗಳು ದಾಖಲಾಗಿವೆ. ಈ ಪೈಕಿ 12.36 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದರೆ, 16,884 ಮಂದಿ ಮೃತಪಟ್ಟಿದ್ದಾರೆ.</p>.<p><strong>ಓದಿ:</strong><a href="https://www.prajavani.net/karnataka-news/ruling-party-mla-alleges-bed-blocking-in-bengaluru-827967.html" itemprop="url" target="_blank">ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ: ಸಂಸದ ತೇಜಸ್ವಿ ಸೂರ್ಯ ಗಂಭೀರ ಆರೋಪ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕದಲ್ಲಿ ಬುಧವಾರ 24 ಗಂಟೆಗಳ ಅವಧಿಯಲ್ಲಿ ಕೋವಿಡ್–19 ದೃಢಪಟ್ಟ ಹೊಸ ಪ್ರಕರಣಗಳ ಸಂಖ್ಯೆ 50 ಸಾವಿರ ದಾಟಿದೆ. ಇದೇ ಅವಧಿಯಲ್ಲಿ ಸೋಂಕಿನಿಂದ 346 ಮಂದಿ ಮೃತಪಟ್ಟಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.</p>.<p>ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದ ಅಂತರದಲ್ಲಿ 50,112 ಪ್ರಕರಣಗಳು ದೃಢಪಟ್ಟಿವೆ. ಕೊರೊನಾ ವೈರಸ್ ಸೋಂಕಿನ ಖಚಿತ ಪ್ರಕರಣಗಳ ಪ್ರಮಾಣ ಶೇ 32.28ರಷ್ಟಾಗಿದೆ.</p>.<p>ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟ 23,106 ಪ್ರಕರಣಗಳು ವರದಿಯಾಗಿದ್ದು, 161 ಮಂದಿ ಸಾವಿಗೀಡಾಗಿದ್ದಾರೆ. 24 ಗಂಟೆಗಳಲ್ಲಿ 26,841 ಮಂದಿ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 4,87,288ಕ್ಕೆ ಏರಿಕೆಯಾಗಿದೆ.</p>.<p>ಮೈಸೂರಿನಲ್ಲಿ 2,790 ಪ್ರಕರಣಗಳು, ತುಮಕೂರಿನಲ್ಲಿ 2,335 ಪ್ರಕರಣಗಳು, ಉಡುಪಿಯಲ್ಲಿ 1,655 ಪ್ರಕರಣಗಳು, ಹಾಸನದಲ್ಲಿ 1,604 ಪ್ರಕರಣಗಳು, ಮಂಡ್ಯದಲ್ಲಿ 1,621 ಪ್ರಕರಣಗಳು ಹಾಗೂ ದಕ್ಷಿಣ ಕನ್ನಡದಲ್ಲಿ 1,529 ಪ್ರಕರಣಗಳು ದಾಖಲಾಗಿವೆ.</p>.<p>ರಾಜ್ಯದಲ್ಲಿ ಒಟ್ಟು 17.41 ಲಕ್ಷಕ್ಕೂ ಅಧಿಕ ಪ್ರರಕಣಗಳು ದಾಖಲಾಗಿವೆ. ಈ ಪೈಕಿ 12.36 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದರೆ, 16,884 ಮಂದಿ ಮೃತಪಟ್ಟಿದ್ದಾರೆ.</p>.<p><strong>ಓದಿ:</strong><a href="https://www.prajavani.net/karnataka-news/ruling-party-mla-alleges-bed-blocking-in-bengaluru-827967.html" itemprop="url" target="_blank">ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ: ಸಂಸದ ತೇಜಸ್ವಿ ಸೂರ್ಯ ಗಂಭೀರ ಆರೋಪ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>