ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ರಾಜ್ಯದಲ್ಲಿ 24 ಗಂಟೆಗಳಲ್ಲಿ 24,714 ಮಂದಿ ಗುಣಮುಖ

Last Updated 4 ಮೇ 2021, 15:23 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌–19 ದೃಢಪಟ್ಟ 44,631 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 292 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ವೈರಸ್‌ ಸೋಂಕು ದೃಢಪಟ್ಟ 20,870 ಪ್ರಕರಣಗಳು ವರದಿಯಾಗಿದ್ದು, 132 ಮಂದಿ ಸಾವಿಗೀಡಾಗಿದ್ದಾರೆ. ಮೈಸೂರಿನಲ್ಲಿ 2,293 ಪ್ರಕರಣಗಳು, ಹಾಸನದಲ್ಲಿ 2,278 ಪ್ರಕರಣಗಳು, ತುಮಕೂರಿನಲ್ಲಿ 1,636, ಮಂಡ್ಯದಲ್ಲಿ 1,506 ಪ್ರಕರಣಗಳು, ಬಳ್ಳಾರಿಯಲ್ಲಿ 1,280 ಪ್ರಕರಣಗಳು, ಕಲಬುರ್ಗಿಯಲ್ಲಿ 1,162, ಬೆಂಗಳೂರು ಗ್ರಾಮಾಂತರದಲ್ಲಿ 996 ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 985 ಪ್ರಕರಣಗಳು ದಾಖಲಾಗಿವೆ.

24 ಗಂಟೆಗಳಲ್ಲಿ 24,714 ಮಂದಿ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 4,64,363ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಒಟ್ಟು 16,90,934 ಪ್ರರಕಣಗಳು ದಾಖಲಾಗಿವೆ. ಈ ಪೈಕಿ 12,10,013 ಮಂದಿ ಗುಣಮುಖರಾಗಿದ್ದರೆ, 16,538 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT