ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Updates: 52,253 ಮಂದಿ ಡಿಸ್ಚಾರ್ಜ್, 22,823 ಹೊಸ ಪ್ರಕರಣ

Last Updated 28 ಮೇ 2021, 21:05 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ಪೀಡಿತರಲ್ಲಿ ಮತ್ತೆ 52,253 ಮಂದಿ ಗುಣವಾಗಿದ್ದಾರೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 3.72 ಲಕ್ಷಕ್ಕೆ ಇಳಿಕೆಯಾಗಿದೆ.

ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ 22,823 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಒಂದು ದಿನದ ಅವಧಿಯಲ್ಲಿ 1.38 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣವು ಶೇ 16.42ಕ್ಕೆ ಇಳಿಕೆಯಾಗಿದೆ. ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 25.46 ಲಕ್ಷ ದಾಟಿದೆ.

ಕೊರೊನಾ ಸೋಂಕಿತರಲ್ಲಿ ಬೆಂಗಳೂರಿನಲ್ಲಿ 192 ಮಂದಿ ಸೇರಿದಂತೆ ರಾಜ್ಯದಲ್ಲಿ 401 ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದೆ. ಮರಣ ಪ್ರಮಾಣ ದರ ಶೇ 1.75ಕ್ಕೆ ಇಳಿಕೆಯಾಗಿದೆ. ಈವರೆಗೆ ಕೋವಿಡ್‌ಗೆ ಮೃತಪಟ್ಟವರ ಒಟ್ಟು ಸಂಖ್ಯೆ 27,806ಕ್ಕೆ ಏರಿಕೆಯಾಗಿದೆ.

10 ಜಿಲ್ಲೆಗಳಲ್ಲಿ 10ಕ್ಕೂ ಅಧಿಕ ಮರಣ ಪ್ರಕರಣಗಳು ಹೊಸದಾಗಿ ವರದಿಯಾಗಿವೆ. ಮೈಸೂರಿನಲ್ಲಿ 20 ಮಂದಿ, ಬಳ್ಳಾರಿಯಲ್ಲಿ 17 ಮಂದಿ, ತುಮಕೂರಿನಲ್ಲಿ 15 ಮಂದಿ, ಧಾರವಾಡದಲ್ಲಿ 14 ಮಂದಿ, ಹಾಸನ ಹಾಗೂ ಶಿವಮೊಗ್ಗದಲ್ಲಿ ತಲಾ 13 ಮಂದಿ, ಉತ್ತರ ಕನ್ನಡ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ತಲಾ 11 ಮಂದಿ, ಬೆಳಗಾವಿಯಲ್ಲಿ 10 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ.

ಕೋವಿಡ್‌ ಪೀಡಿತರಲ್ಲಿ ಚೇತರಿಸಿಕೊಳ್ಳುವವರ ಸಂಖ್ಯೆ ಕೆಲ ದಿನಗಳಿಂದ ಹೆಚ್ಚಳವಾಗಿದೆ. ಈ ತಿಂಗಳು 28 ದಿನಗಳ ಅವಧಿಯಲ್ಲಿ 10.23 ಲಕ್ಷ ಮಂದಿ ಸೋಂಕಿತರಾಗಿದ್ದಾರೆ. ಇದೇ ಅವಧಿಯಲ್ಲಿ ಸೋಂಕಿತರಲ್ಲಿ 10.21 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ 24 ಗಂಟೆಗಳ ಅವಧಿಯಲ್ಲಿ 5,736 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಮೈಸೂರು (1,677), ತುಮಕೂರು (1,326), ಬೆಳಗಾವಿ (1,319), ಶಿವಮೊಗ್ಗ (1,135), ಹಾಸನ (1,170) ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಸಾವಿರಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಹೊಸ ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾವಾರು ಕೋವಿಡ್ ಅಂಕಿ ಅಂಸ ಇಂತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT