ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಅಧ್ಯಯನಕ್ಕೆ ತಜ್ಞರ ತಂಡ

Last Updated 20 ಸೆಪ್ಟೆಂಬರ್ 2020, 19:31 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್‌ ಕಾಯಿಲೆಯಿಂದ ಚೇತರಿಸಿಕೊಂಡವರ ಆರೋಗ್ಯದ ಮೇಲೆ ಸೋಂಕು ಯಾವ ರೀತಿ ಪರಿಣಾಮ ಬೀರಲಿದೆ ಎಂಬುದರಬಗ್ಗೆ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದ್ದಾರೆ.

‘ಪ್ರಾರಂಭಿಕ ಮತ್ತು ತೀವ್ರ ಪ್ರಮಾಣದ ರೋಗ ಲಕ್ಷಣಗಳಿಂದ ಚೇತರಿಸಿಕೊಂಡವರನ್ನು ಅಧ್ಯಯನಕ್ಕೆ ಒಳಪಡಿಸಲಾಗುವುದು. ಮಧುಮೇಹ, ಅಧಿಕ ರಕ್ತದೊತ್ತಡ ಸೇರಿದಂತೆ ವಿವಿಧ ರೋಗಗಳಿಗೆ ಒಳಪಟ್ಟವರ ಆರೋಗ್ಯದಲ್ಲಿನ ವ್ಯತ್ಯಾಸದ ಬಗ್ಗೆಯೂ ವಿಶ್ಲೇಷಣೆ ನಡೆಸಲಾಗುವುದು’ ಎಂದು ಅವರು ಟ್ವೀಟ್ ಮಾಡಿದ್ದಾರೆ.

‘ತಜ್ಞರ ಸಮಿತಿ ನಡೆಸುವ ಅಧ್ಯಯನದಿಂದ ಕೊರೊನಾ ಸೋಂಕು ಮನುಷ್ಯನ ದೇಹದ ಮೇಲೆ ಯಾವ ಪ್ರಮಾಣದಲ್ಲಿ ದಾಳಿ ನಡೆಸಲಿದೆ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ.ಸೂಕ್ತ ಚಿಕಿತ್ಸಾ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಕೂಡ ಸಹಕಾರಿಯಾಗಲಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT