ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 20 ದಿನ: 1.20 ಲಕ್ಷ ಜನ ಗುಣಮುಖ

ರಾಜ್ಯದಲ್ಲಿ 7,385 ಹೊಸ ಪ್ರಕರಣ, 102 ಮಂದಿ ಸಾವು
Last Updated 20 ಆಗಸ್ಟ್ 2020, 18:58 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು:ಕೊರೊನಾ ಸೋಂಕಿತರಲ್ಲಿ ಗುರುವಾರ 6,231 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 1.70 ಲಕ್ಷಕ್ಕೆ ಏರಿಕೆಯಾಗಿದೆ.

20 ದಿನಗಳಲ್ಲಿ 1,20,593 ಮಂದಿ ಗುಣಮುಖರಾಗಿದ್ದಾರೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 6,029 ಮಂದಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ನಿತ್ಯ 50 ಸಾವಿರಕ್ಕೂ ಅಧಿಕ ಕೋವಿಡ್‌ ಪರೀಕ್ಷೆ ನಡೆಯುತ್ತಿದ್ದು, ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ. ಗುರುವಾರ ಮತ್ತೆ 7,385 ಕೋವಿಡ್ ಪ್ರಕರಣಗಳು ಗುರುವಾರ ವರದಿಯಾಗಿದ್ದು, ಸೋಂಕಿತರ ಸಂಖ್ಯೆ 2.56 ಲಕ್ಷ ದಾಟಿದೆ. ಮತ್ತೆ 102 ಮಂದಿ ಮೃತಪಟ್ಟಿದ್ದು, ಮೃತರ ಒಟ್ಟು ಸಂಖ್ಯೆ 4,429ಕ್ಕೆ ತಲುಪಿದೆ.

ರಾಜ್ಯದಲ್ಲಿ 48 ಗಂಟೆಗಳಲ್ಲಿ 14,877 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಈ ತಿಂಗಳು ಪ್ರತಿನಿತ್ಯ ಸರಾಸರಿ 6,643 ಕೋವಿಡ್‌ ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜ್ಯದಲ್ಲಿ 705 ರೋಗಿಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.

ಸದ್ಯ ರಾಜ್ಯದಲ್ಲಿ 82,149 ಸಕ್ರಿಯ‌ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT