<figcaption>""</figcaption>.<p><strong>ಬೆಂಗಳೂರು: </strong>ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಒಂದೇ ದಿನ 3,420 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 32 ಮೃತಪಟ್ಟಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಇಂದು 9,860 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 113 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.</p>.<p>ಇದರೊಂದಿಗೆ ಒಟ್ಟು ಸೋಂಕಿತರಸಂಖ್ಯೆ 3,61,341ಕ್ಕೆ ಏರಿಕೆಯಾಗಿದ್ದು, ಇದುವರೆಗೆ 5,950 ಮಂದಿ ಸಾವಿಗೀಡಾಗಿದ್ದಾರೆ.<br />6,287 ಮಂದಿ ಇಂದು ಬಿಡುಗಡೆಯಾಗಿದ್ದು, ಈವರೆಗೆ 2,60,913 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 94,459 ಸಕ್ರಿಯ ಪ್ರಕರಣಗಳಿದ್ದು, 751 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,35,512ಕ್ಕೆ ತಲುಪಿದೆ. ಈವರೆಗೆ 2,037 ಮಂದಿ ಮೃತಪಟ್ಟಿದ್ದಾರೆ.</p>.<p>ಮೈಸೂರಿನಲ್ಲಿ 667, ಬೆಳಗಾವಿ 470, ಬಳ್ಳಾರಿ 433, ದಕ್ಷಿಣ ಕನ್ನಡ 414, ತುಮಕೂರು 357, ಶಿವಮೊಗ್ಗ 342, ಧಾರವಾಡ 327, ದಾವಣಗೆರೆ 321, ಹಾಸನ 290, ಕೊಪ್ಪಳ 282, ಮಂಡ್ಯ 245, ರಾಯಚೂರು ಜಿಲ್ಲೆಯಲ್ಲಿ 232 ಪ್ರಕರಣಗಳು ದೃಢಪಟ್ಟಿವೆ.</p>.<p><strong>73,317 ಜನರಿಗೆ ಕೋವಿಡ್ ಟೆಸ್ಟ್</strong><br />ಬುಧವಾರ ಒಂದೇ ದಿನ ಒಟ್ಟು 73,317 ಮಂದಿಗೆ ಕೋವಿಡ್–19 ಮಾದರಿ ಪರೀಕ್ಷೆ ನಡೆಸಲಾಗಿದ್ದು, ಇದುವರೆಗೆ ಒಟ್ಟು 30,52,794 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು 38,735 ಆ್ಯಂಟಿಜೆನ್ ಪರೀಕ್ಷೆ ಮತ್ತು 34582 ಮಂದಿ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಗಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು: </strong>ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಒಂದೇ ದಿನ 3,420 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 32 ಮೃತಪಟ್ಟಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಇಂದು 9,860 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 113 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.</p>.<p>ಇದರೊಂದಿಗೆ ಒಟ್ಟು ಸೋಂಕಿತರಸಂಖ್ಯೆ 3,61,341ಕ್ಕೆ ಏರಿಕೆಯಾಗಿದ್ದು, ಇದುವರೆಗೆ 5,950 ಮಂದಿ ಸಾವಿಗೀಡಾಗಿದ್ದಾರೆ.<br />6,287 ಮಂದಿ ಇಂದು ಬಿಡುಗಡೆಯಾಗಿದ್ದು, ಈವರೆಗೆ 2,60,913 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 94,459 ಸಕ್ರಿಯ ಪ್ರಕರಣಗಳಿದ್ದು, 751 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,35,512ಕ್ಕೆ ತಲುಪಿದೆ. ಈವರೆಗೆ 2,037 ಮಂದಿ ಮೃತಪಟ್ಟಿದ್ದಾರೆ.</p>.<p>ಮೈಸೂರಿನಲ್ಲಿ 667, ಬೆಳಗಾವಿ 470, ಬಳ್ಳಾರಿ 433, ದಕ್ಷಿಣ ಕನ್ನಡ 414, ತುಮಕೂರು 357, ಶಿವಮೊಗ್ಗ 342, ಧಾರವಾಡ 327, ದಾವಣಗೆರೆ 321, ಹಾಸನ 290, ಕೊಪ್ಪಳ 282, ಮಂಡ್ಯ 245, ರಾಯಚೂರು ಜಿಲ್ಲೆಯಲ್ಲಿ 232 ಪ್ರಕರಣಗಳು ದೃಢಪಟ್ಟಿವೆ.</p>.<p><strong>73,317 ಜನರಿಗೆ ಕೋವಿಡ್ ಟೆಸ್ಟ್</strong><br />ಬುಧವಾರ ಒಂದೇ ದಿನ ಒಟ್ಟು 73,317 ಮಂದಿಗೆ ಕೋವಿಡ್–19 ಮಾದರಿ ಪರೀಕ್ಷೆ ನಡೆಸಲಾಗಿದ್ದು, ಇದುವರೆಗೆ ಒಟ್ಟು 30,52,794 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು 38,735 ಆ್ಯಂಟಿಜೆನ್ ಪರೀಕ್ಷೆ ಮತ್ತು 34582 ಮಂದಿ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಗಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>