Covid-19 Karnataka Update | ಬೆಂಗಳೂರಿನಲ್ಲಿ 3,420 ಹೊಸ ಪ್ರಕರಣ, 113 ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಒಂದೇ ದಿನ 3,420 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 32 ಮೃತಪಟ್ಟಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಇಂದು 9,860 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 113 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,61,341ಕ್ಕೆ ಏರಿಕೆಯಾಗಿದ್ದು, ಇದುವರೆಗೆ 5,950 ಮಂದಿ ಸಾವಿಗೀಡಾಗಿದ್ದಾರೆ.
6,287 ಮಂದಿ ಇಂದು ಬಿಡುಗಡೆಯಾಗಿದ್ದು, ಈವರೆಗೆ 2,60,913 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 94,459 ಸಕ್ರಿಯ ಪ್ರಕರಣಗಳಿದ್ದು, 751 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,35,512ಕ್ಕೆ ತಲುಪಿದೆ. ಈವರೆಗೆ 2,037 ಮಂದಿ ಮೃತಪಟ್ಟಿದ್ದಾರೆ.
ಮೈಸೂರಿನಲ್ಲಿ 667, ಬೆಳಗಾವಿ 470, ಬಳ್ಳಾರಿ 433, ದಕ್ಷಿಣ ಕನ್ನಡ 414, ತುಮಕೂರು 357, ಶಿವಮೊಗ್ಗ 342, ಧಾರವಾಡ 327, ದಾವಣಗೆರೆ 321, ಹಾಸನ 290, ಕೊಪ್ಪಳ 282, ಮಂಡ್ಯ 245, ರಾಯಚೂರು ಜಿಲ್ಲೆಯಲ್ಲಿ 232 ಪ್ರಕರಣಗಳು ದೃಢಪಟ್ಟಿವೆ.
73,317 ಜನರಿಗೆ ಕೋವಿಡ್ ಟೆಸ್ಟ್
ಬುಧವಾರ ಒಂದೇ ದಿನ ಒಟ್ಟು 73,317 ಮಂದಿಗೆ ಕೋವಿಡ್–19 ಮಾದರಿ ಪರೀಕ್ಷೆ ನಡೆಸಲಾಗಿದ್ದು, ಇದುವರೆಗೆ ಒಟ್ಟು 30,52,794 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು 38,735 ಆ್ಯಂಟಿಜೆನ್ ಪರೀಕ್ಷೆ ಮತ್ತು 34582 ಮಂದಿ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಗಾಗಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.