Covid-19 Karnataka Update | 9,280 ಹೊಸ ಪ್ರಕರಣ ದೃಢ, 116 ಮಂದಿ ಸಾವು

ಬೆಂಗಳೂರು: ರಾಜ್ಯದಾದ್ಯಂತ ಶುಕ್ರವಾರ ಒಂದೇ ದಿನ 9,280 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 116 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,79,486 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 6,170 ಮಂದಿ ಸಾವಿಗೀಡಾಗಿದ್ದಾರೆ.
6161 ಮಂದಿ ಇಂದು ಬಿಡುಗಡೆಯಾಗಿದ್ದು, ಈವರೆಗೆ 2,74,196 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 99,101 ಸಕ್ರಿಯ ಪ್ರಕರಣಗಳಿದ್ದು, 785 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಂದು ಕೂಡ 2,963 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 25 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 1,41,664ಕ್ಕೆ ತಲುಪಿದೆ. ಈವರೆಗೆ 2,091 ಮಂದಿ ಮೃತಪಟ್ಟಿದ್ದಾರೆ.
ಇತ್ತ ಹೊಸದಾಗಿ ಮೈಸೂರಿನಲ್ಲಿ 776, ಬಳ್ಳಾರಿ 447, ದಕ್ಷಿಣ ಕನ್ನಡ 428, ತುಮಕೂರು 424, ಶಿವಮೊಗ್ಗ 350 ಹಾಸನ 340, ಧಾರವಾಡ 297, ಬೆಳಗಾವಿ 278, ದಾವಣಗೆರೆ 263, ಕಲಬುರ್ಗಿ 226, ಚಿಕ್ಕಮಗಳೂರು 223, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 206 ಹೊಸ ಪ್ರಕರಣಗಳು ಪತ್ತೆಯಾಗಿವೆ.
73,192 ಜನರಿಗೆ ಕೋವಿಡ್ ಟೆಸ್ಟ್
ಶುಕ್ರವಾರ ಒಂದೇ ದಿನ ಒಟ್ಟು 73,192 ಮಂದಿಗೆ ಕೋವಿಡ್–19 ಮಾದರಿ ಪರೀಕ್ಷೆ ನಡೆಸಲಾಗಿದ್ದು, ಇದುವರೆಗೆ ಒಟ್ಟು 31,97,110 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು 31,641 ಆ್ಯಂಟಿಜೆನ್ ಪರೀಕ್ಷೆ ಮತ್ತು 41,551 ಮಂದಿಗೆ ಆರ್ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.