ಬೆಂಗಳೂರು: ರಾಜ್ಯದಾದ್ಯಂತ ಶನಿವಾರ ಒಂದೇ ದಿನ 9,102 ಮಂದಿ ಸೋಂಕಿತರ ಗುಣಮುಖರಾಗಿದ್ದಾರೆ. ಈವರೆಗೆ 2,83,298 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು 9,746 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 128 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,89,232 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 6,298 ಮಂದಿ ಸಾವಿಗೀಡಾಗಿದ್ದಾರೆ.
ಸದ್ಯ ರಾಜ್ಯದಲ್ಲಿ 99,617 ಸಕ್ರಿಯ ಪ್ರಕರಣಗಳಿದ್ದು, 785 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಂದು ಕೂಡ 3,093 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 34 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 1,44,757ಕ್ಕೆ ತಲುಪಿದೆ. ಈವರೆಗೆ 2,125 ಮಂದಿ ಮೃತಪಟ್ಟಿದ್ದಾರೆ.
ಹೊಸದಾಗಿ ಮೈಸೂರಿನಲ್ಲಿ 790, ಬೆಳಗಾವಿ 473, ಬಳ್ಳಾರಿ 366, ದಾವಣಗೆರೆ 395, ದಕ್ಷಿಣ ಕನ್ನಡ 377, ಹಾಸನ 347, ಶಿವಮೊಗ್ಗ 346, ಮಂಡ್ಯ 246, ಕೊಪ್ಪಳ 243, ಚಿತ್ರದುರ್ಗ 240, ಚಿಕ್ಕಮಗಳೂರು 238, ಧಾರವಾಡ 227, ಉತ್ತರ ಕನ್ನಡ ಜಿಲ್ಲೆಯಲ್ಲಿ 207 ಹೊಸ ಪ್ರಕರಣಗಳು ಪತ್ತೆಯಾಗಿವೆ.
76,761 ಜನರಿಗೆ ಕೋವಿಡ್ ಟೆಸ್ಟ್ ಶುಕ್ರವಾರ ಒಂದೇ ದಿನ ಒಟ್ಟು 76,761 ಮಂದಿಗೆ ಕೋವಿಡ್–19 ಮಾದರಿ ಪರೀಕ್ಷೆ ನಡೆಸಲಾಗಿದ್ದು, ಇದುವರೆಗೆ ಒಟ್ಟು 32,73,871 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು 35,530 ಆ್ಯಂಟಿಜೆನ್ ಪರೀಕ್ಷೆ ಮತ್ತು 41,231 ಮಂದಿಗೆ ಆರ್ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದೆ.