ಬೆಂಗಳೂರು, ಬೀದರ್, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಬೆಳಗಾವಿ, ವಿಜಯಪುರ, ಉಡುಪಿ, ಹಾವೇರಿ, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನ.30 ರಿಂದ ಡಿ.9ರ ಅವಧಿಯಲ್ಲಿ 2.9 ಲಕ್ಷ ಮಂದಿ ಸಂಪರ್ಕಕ್ಕೆ ಒಳಗಾದವರ ಪರೀಕ್ಷೆ ನಡೆಸುವ ಗುರಿ ಹಾಕಿಕೊಳ್ಳಲಾಗಿತ್ತು. ಆದರೆ, ಕೇವಲ 50 ಸಾವಿರ (ಶೇ 17ರಷ್ಟು) ಮಂದಿಯನ್ನು ಪರೀಕ್ಷಿಸಲಾಗಿದೆ. ಈ ಜಿಲ್ಲೆಗಳಲ್ಲಿ 49,688 ಮಂದಿ ಸಾರಿ ಮತ್ತು ಐಎಲ್ಐ ಸಮಸ್ಯೆ ಎದುರಿಸುತ್ತಿರುವವರನ್ನು ಗುರುತಿಸಲಾಗಿತ್ತು. ಆದರೆ, ಅವರಲ್ಲಿ ಕೇವಲ 11,232 (ಶೇ 23ರಷ್ಟು) ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.