<p><strong>ಮಂಡ್ಯ</strong>: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಎಎಸ್ಪಿ ಧನಂಜಯ ಸೇರಿ 15 ಪೊಲೀಸ್ ಸಿಬ್ಬಂದಿಗೆ ಶನಿವಾರ ಕೋವಿಡ್–19 ಪತ್ತೆಯಾಗಿದೆ.</p>.<p>ಮಳವಳ್ಳಿ ಡಿವೈಎಸ್ಪಿ ಲಕ್ಷ್ಮಿನಾರಾಯಣ ಪ್ರಸಾದ್, ಮಂಡ್ಯ ಡಿವೈಎಸ್ಪಿ ಮಂಜುನಾಥ್, ಕೆ.ಆರ್.ಪೇಟೆ ಠಾಣೆ ಇನ್ಸ್ಪೆಕ್ಟರ್ ನಿರಂಜನ್, ಮಂಡ್ಯ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ಆನಂದೇಗೌಡ, ಶ್ರೀರಂಗಪಟ್ಟಣ ಠಾಣೆ ಇನ್ಸ್ಪೆಕ್ಟರ್ ಪುನೀತ್ ಸೇರಿ ನಾಲ್ವರು ಎಎಸ್ಐ, ನಾಲ್ವರು ಕಾನ್ಸ್ಟೆಬಲ್ಗಳಿಗೆ ಸೋಂಕು ಪತ್ತೆಯಾಗಿದೆ.</p>.<p>ಕಳೆದ ವಾರ ಪೊಲೀಸ್ ಸಿಬ್ಬಂದಿಯ ಕ್ರೀಡಾಕೂಟ ನಡೆಯಿತು. ಆದಿಚುಂಚನಗಿರಿಯಲ್ಲಿ ನಡೆದ ಯುವಜನೋತ್ಸವದಲ್ಲಿ ಜ.4ರಂದು ರಾಜ್ಯಪಾಲ ಥ್ಯಾವರ್ಚಂದ್ ಗೆಹಲೋತ್, ಜ.5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು. ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ಭಾಗವಹಿಸಿದ್ದರು. ಜೊತೆಗೆ ಕೋವಿಡ್ ಕರ್ತವ್ಯದಲ್ಲೂ ತೊಡಗಿದ್ದರು. ಈ ವೇಳೆ ಸೋಂಕು ಬಂದಿರಬಹುದು ಎಂದು ಶಂಕಿಸಲಾಗಿದೆ.</p>.<p>‘ಎಲ್ಲರೂ ಆರೋಗ್ಯದಿಂದಿದ್ದು ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಎಎಸ್ಪಿ ಧನಂಜಯ ಸೇರಿ 15 ಪೊಲೀಸ್ ಸಿಬ್ಬಂದಿಗೆ ಶನಿವಾರ ಕೋವಿಡ್–19 ಪತ್ತೆಯಾಗಿದೆ.</p>.<p>ಮಳವಳ್ಳಿ ಡಿವೈಎಸ್ಪಿ ಲಕ್ಷ್ಮಿನಾರಾಯಣ ಪ್ರಸಾದ್, ಮಂಡ್ಯ ಡಿವೈಎಸ್ಪಿ ಮಂಜುನಾಥ್, ಕೆ.ಆರ್.ಪೇಟೆ ಠಾಣೆ ಇನ್ಸ್ಪೆಕ್ಟರ್ ನಿರಂಜನ್, ಮಂಡ್ಯ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ಆನಂದೇಗೌಡ, ಶ್ರೀರಂಗಪಟ್ಟಣ ಠಾಣೆ ಇನ್ಸ್ಪೆಕ್ಟರ್ ಪುನೀತ್ ಸೇರಿ ನಾಲ್ವರು ಎಎಸ್ಐ, ನಾಲ್ವರು ಕಾನ್ಸ್ಟೆಬಲ್ಗಳಿಗೆ ಸೋಂಕು ಪತ್ತೆಯಾಗಿದೆ.</p>.<p>ಕಳೆದ ವಾರ ಪೊಲೀಸ್ ಸಿಬ್ಬಂದಿಯ ಕ್ರೀಡಾಕೂಟ ನಡೆಯಿತು. ಆದಿಚುಂಚನಗಿರಿಯಲ್ಲಿ ನಡೆದ ಯುವಜನೋತ್ಸವದಲ್ಲಿ ಜ.4ರಂದು ರಾಜ್ಯಪಾಲ ಥ್ಯಾವರ್ಚಂದ್ ಗೆಹಲೋತ್, ಜ.5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು. ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ಭಾಗವಹಿಸಿದ್ದರು. ಜೊತೆಗೆ ಕೋವಿಡ್ ಕರ್ತವ್ಯದಲ್ಲೂ ತೊಡಗಿದ್ದರು. ಈ ವೇಳೆ ಸೋಂಕು ಬಂದಿರಬಹುದು ಎಂದು ಶಂಕಿಸಲಾಗಿದೆ.</p>.<p>‘ಎಲ್ಲರೂ ಆರೋಗ್ಯದಿಂದಿದ್ದು ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>