ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ, 3,284 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಬುಧವಾರ 31 ಸೋಂಕಿತರು ಮೃತಪಟ್ಟಿದ್ದಾರೆ. ಮೈಸೂರು 951, ಬಳ್ಳಾರಿ 510, ದಕ್ಷಿಣ ಕನ್ನಡ 314, ಬೆಳಗಾವಿ, ದಾವಣಗೆರೆ, ಧಾರವಾಡ, ಉಡುಪಿಯಲ್ಲಿ 200ಕ್ಕೂ ಹೆಚ್ಚು ಜನ ಸೋಂಕಿತರಾಗಿದ್ದಾರೆ. ಉಳಿದಂತೆ 12 ಜಿಲ್ಲೆಗಳಲ್ಲಿ 50ಕ್ಕೂ ಕಡಿಮೆ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, ಮೈಸೂರು (20) ಹಾಗೂ ದಕ್ಷಿಣ ಕನ್ನಡದಲ್ಲಿಯೂ (11) ಮೃತರ ಸಂಖ್ಯೆ ಎರಡಂಕಿ ತಲುಪಿದೆ.