<p><strong>ಬೆಂಗಳೂರು</strong>: ರಾಜ್ಯದಲ್ಲಿ ಕೊರೊನಾ ಸೋಂಕಿತರಲ್ಲಿ ಮತ್ತೆ 463 ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಈವರೆಗೆ ಕೋವಿಡ್ಗೆ ಮೃತಪಟ್ಟವರ ಒಟ್ಟು ಸಂಖ್ಯೆ 30 ಸಾವಿರ (30,017) ದಾಟಿದೆ.</p>.<p>ರಾಜ್ಯದಲ್ಲಿ ಕಳೆದ ವರ್ಷ ಮಾರ್ಚ್ 10ರಂದು ಮೊದಲ ಮರಣ ಪ್ರಕರಣ ವರದಿಯಾಗಿತ್ತು.</p>.<p>ಡಿಸೆಂಬರ್ ಅಂತ್ಯಕ್ಕೆ ಮರಣ ಪ್ರಮಾಣವು ಶೇ 0.94ರಷ್ಟಿತ್ತು. ಆ ವೇಳೆಗೆ 12,090 ಮಂದಿ ಮೃತಪಟ್ಟಿದ್ದರು.</p>.<p>ಎರಡನೇ ಅಲೆಯಲ್ಲಿ ಸೋಂಕಿತರ ಜತೆಗೆ ಕಾಯಿಲೆಯ ತೀವ್ರತೆಗೆ ಮೃತಪಡು ವವರ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಈ ವರ್ಷ 5 ತಿಂಗಳಲ್ಲಿಯೇ 17 ಸಾವಿರಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಸದ್ಯ ಮರಣ ಪ್ರಮಾಣ ದರ ಶೇ 2.82ರಷ್ಟಿದೆ.</p>.<p>ರಾಜ್ಯದಲ್ಲಿ 24 ಗಂಟೆಗಳ ಅವಧಿ ಯಲ್ಲಿ 16,387 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಒಂದು ದಿನದ ಅವಧಿಯಲ್ಲಿ 1.45 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣವು ಶೇ 11.22ಕ್ಕೆ ಇಳಿಕೆಯಾಗಿದೆ. ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 26.35 ಲಕ್ಷ ದಾಟಿದೆ.</p>.<p>ಕೋವಿಡ್ ಪೀಡಿತರಲ್ಲಿ ಮತ್ತೆ 21,199 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಚೇತರಿಕೆ ಹೊಂದಿದವರ ಸಂಖ್ಯೆ 23.12 ಲಕ್ಷ ದಾಟಿದೆ.</p>.<p>ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದ್ದು, 2.93 ಲಕ್ಷ ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.</p>.<p>ಬೆಂಗಳೂರಿನಲ್ಲಿ ಮತ್ತೆ 307 ಮಂದಿ ಮೃತಪಟ್ಟಿದ್ದಾರೆ.</p>.<p>ಬೆಳಗಾವಿಯಲ್ಲಿ 17 ಮಂದಿ, ಹಾಸನ, ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರಿನಲ್ಲಿ ತಲಾ 12 ಮಂದಿ, ಶಿವಮೊಗ್ಗದಲ್ಲಿ 10 ಮಂದಿ, ಉತ್ತರ ಕನ್ನಡದಲ್ಲಿ 9 ಮಂದಿ, ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತಲಾ 8 ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ಕೊರೊನಾ ಸೋಂಕಿತರಲ್ಲಿ ಮತ್ತೆ 463 ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಈವರೆಗೆ ಕೋವಿಡ್ಗೆ ಮೃತಪಟ್ಟವರ ಒಟ್ಟು ಸಂಖ್ಯೆ 30 ಸಾವಿರ (30,017) ದಾಟಿದೆ.</p>.<p>ರಾಜ್ಯದಲ್ಲಿ ಕಳೆದ ವರ್ಷ ಮಾರ್ಚ್ 10ರಂದು ಮೊದಲ ಮರಣ ಪ್ರಕರಣ ವರದಿಯಾಗಿತ್ತು.</p>.<p>ಡಿಸೆಂಬರ್ ಅಂತ್ಯಕ್ಕೆ ಮರಣ ಪ್ರಮಾಣವು ಶೇ 0.94ರಷ್ಟಿತ್ತು. ಆ ವೇಳೆಗೆ 12,090 ಮಂದಿ ಮೃತಪಟ್ಟಿದ್ದರು.</p>.<p>ಎರಡನೇ ಅಲೆಯಲ್ಲಿ ಸೋಂಕಿತರ ಜತೆಗೆ ಕಾಯಿಲೆಯ ತೀವ್ರತೆಗೆ ಮೃತಪಡು ವವರ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಈ ವರ್ಷ 5 ತಿಂಗಳಲ್ಲಿಯೇ 17 ಸಾವಿರಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಸದ್ಯ ಮರಣ ಪ್ರಮಾಣ ದರ ಶೇ 2.82ರಷ್ಟಿದೆ.</p>.<p>ರಾಜ್ಯದಲ್ಲಿ 24 ಗಂಟೆಗಳ ಅವಧಿ ಯಲ್ಲಿ 16,387 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಒಂದು ದಿನದ ಅವಧಿಯಲ್ಲಿ 1.45 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣವು ಶೇ 11.22ಕ್ಕೆ ಇಳಿಕೆಯಾಗಿದೆ. ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 26.35 ಲಕ್ಷ ದಾಟಿದೆ.</p>.<p>ಕೋವಿಡ್ ಪೀಡಿತರಲ್ಲಿ ಮತ್ತೆ 21,199 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಚೇತರಿಕೆ ಹೊಂದಿದವರ ಸಂಖ್ಯೆ 23.12 ಲಕ್ಷ ದಾಟಿದೆ.</p>.<p>ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದ್ದು, 2.93 ಲಕ್ಷ ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.</p>.<p>ಬೆಂಗಳೂರಿನಲ್ಲಿ ಮತ್ತೆ 307 ಮಂದಿ ಮೃತಪಟ್ಟಿದ್ದಾರೆ.</p>.<p>ಬೆಳಗಾವಿಯಲ್ಲಿ 17 ಮಂದಿ, ಹಾಸನ, ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರಿನಲ್ಲಿ ತಲಾ 12 ಮಂದಿ, ಶಿವಮೊಗ್ಗದಲ್ಲಿ 10 ಮಂದಿ, ಉತ್ತರ ಕನ್ನಡದಲ್ಲಿ 9 ಮಂದಿ, ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತಲಾ 8 ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>