<p><strong>ಬೆಂಗಳೂರು</strong>: 'ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಕಾಣಿಸಿಕೊಳ್ಳಲಿದೆ ಎಂಬ ವರದಿ ಕುರಿತಂತೆ ತಜ್ಞರು ಮತ್ತು ಅಧಿಕಾರಿಗಳ ಜತೆ ಚರ್ಚಿಸಿ, ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ನಿರ್ಧರಿಸಲಾಗುವುದು’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.</p>.<p>ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ತಜ್ಞರ ವರದಿ ಇನ್ನೂ ಅಧಿಕಾರಿಗಳ ಮಟ್ಟದಲ್ಲಿದೆ. ಆ ವರದಿ ಮತ್ತು ಮುಂದೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ತಾಂತ್ರಿಕ ಸಮಿತಿ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಜತೆ ಶುಕ್ರವಾರ ಸಭೆ ನಡೆಸಲಾಗುವುದು. ಸಭೆಯ ತೀರ್ಮಾನಗಳ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವ ಸಹೋದ್ಯೋಗಿಗಳ ಜತೆ ಸಮಾಲೋಚಿಸಿ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು’ ಎಂದರು.</p>.<p>‘ಕೋವಿಡ್ನ ಎರಡನೇ ಅಲೆ ಪರಿಣಾಮಕಾರಿಯಾಗಿರುತ್ತದೆ ಎಂದು ವೈಯಕ್ತಿಕವಾಗಿ ನನಗೆ ಅನ್ನಿಸುತ್ತಿಲ್ಲ. ಆದರೂ, ತಜ್ಞರು ನಡೆಸಿರುವ ಅಧ್ಯಯನ ವರದಿಯಲ್ಲಿರುವ ಅಂಶಗಳನ್ನು ಪರಿಶೀಲಿಸಿ ಎಚ್ಚರಿಕೆಯ ಹೆಜ್ಜೆ ಇಡಲಾಗುವುದು’ ಎಂದರು.</p>.<p>‘ಕೋವಿಡ್ ಲಸಿಕೆ ವಿತರಣೆ ಮತ್ತು ದಾಸ್ತಾನು ಸಂಬಂಧ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವ ವ್ಯಾಕ್ಸಿನ್,<br />ಎಷ್ಟು ಪ್ರಮಾಣದಲ್ಲಿ ನೀಡಬೇಕು, ಯಾರಿಗೆ ನೀಡಬೇಕು ಎಂಬ ವಿಷಯಗಳು ಇತ್ಯರ್ಥಗೊಂಡ ತಕ್ಷಣ ವ್ಯಾಕ್ಸಿನ್ ವಿತರಣೆ<br />ವ್ಯವಸ್ಥಿತವಾಗಿ ನಡೆಯಲಿದೆ’ ಎಂದರು.</p>.<p class="Subhead"><strong>ವಾರದೊಳಗೆ ವೇತನ: </strong>‘ಕಡ್ಡಾಯ ಸೇವೆಗಾಗಿ ನೇಮಕಗೊಂಡಿರುವ ರೆಸಿಡೆಂಟ್ ಡಾಕ್ಟರ್ಗಳಿಗೆ ತಾಂತ್ರಿಕ ಕಾರಣಗಳಿಂದ ವೇತನ ಬಿಡುಗಡೆ ವಿಳಂಬವಾಗಿದೆ. ವಾರದೊಳಗಾಗಿ ವೇತನ ಬಿಡುಗಡೆಯಾಗಲಿದೆ. ಅಲ್ಲಿಯವರೆಗೆ ಆಯಾ ಕಾಲೇಜುಗಳ ಆಡಳಿತ ಮಂಡಳಿಗಳಿಗೆ ವೇತನ ನೀಡಲು ಸೂಚಿಸಲಾಗಿದೆ’ ಎಂದರು.</p>.<p class="Subhead"><strong>ವಿಶ್ವನಾಥ್ ಒಂಟಿಯಲ್ಲ: </strong>‘ವಿಶ್ವನಾಥ್ ಅವರು ಒಂಟಿಯಲ್ಲ. ಮುಖ್ಯಮಂತ್ರಿ ಸಹಿತ ನಾವು 17 ಮಂದಿಯೂ ಅವರ ಜೊತೆಗಿದ್ದೇವೆ. ನಾವೆಲ್ಲರೂ ಈಗ ಬಿಜೆಪಿ ಕಾರ್ಯಕರ್ತರೇ ಆಗಿದ್ದೇವೆ. ಅವರನ್ನು ಏಕಾಂಗಿಯಾಗಿಸುವ ಪ್ರಶ್ನೆಯೇ ಇಲ್ಲ’ ಎಂದೂ ಸುಧಾಕರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: 'ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಕಾಣಿಸಿಕೊಳ್ಳಲಿದೆ ಎಂಬ ವರದಿ ಕುರಿತಂತೆ ತಜ್ಞರು ಮತ್ತು ಅಧಿಕಾರಿಗಳ ಜತೆ ಚರ್ಚಿಸಿ, ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ನಿರ್ಧರಿಸಲಾಗುವುದು’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.</p>.<p>ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ತಜ್ಞರ ವರದಿ ಇನ್ನೂ ಅಧಿಕಾರಿಗಳ ಮಟ್ಟದಲ್ಲಿದೆ. ಆ ವರದಿ ಮತ್ತು ಮುಂದೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ತಾಂತ್ರಿಕ ಸಮಿತಿ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಜತೆ ಶುಕ್ರವಾರ ಸಭೆ ನಡೆಸಲಾಗುವುದು. ಸಭೆಯ ತೀರ್ಮಾನಗಳ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವ ಸಹೋದ್ಯೋಗಿಗಳ ಜತೆ ಸಮಾಲೋಚಿಸಿ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು’ ಎಂದರು.</p>.<p>‘ಕೋವಿಡ್ನ ಎರಡನೇ ಅಲೆ ಪರಿಣಾಮಕಾರಿಯಾಗಿರುತ್ತದೆ ಎಂದು ವೈಯಕ್ತಿಕವಾಗಿ ನನಗೆ ಅನ್ನಿಸುತ್ತಿಲ್ಲ. ಆದರೂ, ತಜ್ಞರು ನಡೆಸಿರುವ ಅಧ್ಯಯನ ವರದಿಯಲ್ಲಿರುವ ಅಂಶಗಳನ್ನು ಪರಿಶೀಲಿಸಿ ಎಚ್ಚರಿಕೆಯ ಹೆಜ್ಜೆ ಇಡಲಾಗುವುದು’ ಎಂದರು.</p>.<p>‘ಕೋವಿಡ್ ಲಸಿಕೆ ವಿತರಣೆ ಮತ್ತು ದಾಸ್ತಾನು ಸಂಬಂಧ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವ ವ್ಯಾಕ್ಸಿನ್,<br />ಎಷ್ಟು ಪ್ರಮಾಣದಲ್ಲಿ ನೀಡಬೇಕು, ಯಾರಿಗೆ ನೀಡಬೇಕು ಎಂಬ ವಿಷಯಗಳು ಇತ್ಯರ್ಥಗೊಂಡ ತಕ್ಷಣ ವ್ಯಾಕ್ಸಿನ್ ವಿತರಣೆ<br />ವ್ಯವಸ್ಥಿತವಾಗಿ ನಡೆಯಲಿದೆ’ ಎಂದರು.</p>.<p class="Subhead"><strong>ವಾರದೊಳಗೆ ವೇತನ: </strong>‘ಕಡ್ಡಾಯ ಸೇವೆಗಾಗಿ ನೇಮಕಗೊಂಡಿರುವ ರೆಸಿಡೆಂಟ್ ಡಾಕ್ಟರ್ಗಳಿಗೆ ತಾಂತ್ರಿಕ ಕಾರಣಗಳಿಂದ ವೇತನ ಬಿಡುಗಡೆ ವಿಳಂಬವಾಗಿದೆ. ವಾರದೊಳಗಾಗಿ ವೇತನ ಬಿಡುಗಡೆಯಾಗಲಿದೆ. ಅಲ್ಲಿಯವರೆಗೆ ಆಯಾ ಕಾಲೇಜುಗಳ ಆಡಳಿತ ಮಂಡಳಿಗಳಿಗೆ ವೇತನ ನೀಡಲು ಸೂಚಿಸಲಾಗಿದೆ’ ಎಂದರು.</p>.<p class="Subhead"><strong>ವಿಶ್ವನಾಥ್ ಒಂಟಿಯಲ್ಲ: </strong>‘ವಿಶ್ವನಾಥ್ ಅವರು ಒಂಟಿಯಲ್ಲ. ಮುಖ್ಯಮಂತ್ರಿ ಸಹಿತ ನಾವು 17 ಮಂದಿಯೂ ಅವರ ಜೊತೆಗಿದ್ದೇವೆ. ನಾವೆಲ್ಲರೂ ಈಗ ಬಿಜೆಪಿ ಕಾರ್ಯಕರ್ತರೇ ಆಗಿದ್ದೇವೆ. ಅವರನ್ನು ಏಕಾಂಗಿಯಾಗಿಸುವ ಪ್ರಶ್ನೆಯೇ ಇಲ್ಲ’ ಎಂದೂ ಸುಧಾಕರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>