<p><strong>ಬೆಂಗಳೂರು</strong>: ಕೊರೊನಾ ಪರಿಸ್ಥಿತಿಯಲ್ಲಿ ಶಾಲಾರಂಭ ಮತ್ತು ಸಮುದಾಯದ ಸಹಕಾರ ಕುರಿತಂತೆ ತಮ್ಮ ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ಎಲ್ಲ ಸಚಿವರು ಮತ್ತು ಶಾಸಕರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.</p>.<p>ಶಾಲೆಗಳನ್ನು ಯಾವಾಗ ಆರಂಭಿಸಬಹುದು, ಒಂದು ವೇಳೆ ಆರಂಭಿಸುವುದಾದರೆ ಯಾವ ತರಗತಿಯನ್ನು ಮೊದಲು ಆರಂಭಿಸಬಹುದು, ಸಮುದಾಯ ಮತ್ತು ಜನಪ್ರತಿನಿಧಿಗಳಿಂದ ಶಿಕ್ಷಣ ಇಲಾಖೆ ಯಾವ ರೀತಿಯ ಸಹಕಾರ ನಿರೀಕ್ಷಿಸಬಹುದು ಎಂಬ ಬಗ್ಗೆ ಸಲಹೆ, ಸೂಚನೆ ನೀಡುವಂತೆ ಪತ್ರದಲ್ಲಿ ಅವರು ಕೋರಿದ್ದಾರೆ.</p>.<p>ಕೊರೊನಾ ಕಾರಣದಿಂದ ಕಳೆದ ಮಾರ್ಚ್ ನಲ್ಲಿ ಮುಚ್ಚಿದ ಶಾಲೆಗಳನ್ನು ಇನ್ನೂ ತೆರೆಯಲಾಗುತ್ತಿಲ್ಲ. ಜೂನ್ ನಲ್ಲಿ ಆರಂಭವಾಗಬೇಕಿದ್ದ ಪ್ರಸಕ್ತ ಶೈಕ್ಷಣಿಕ ಸಾಲಿನ ಚಟುವಟಿಕೆ ಇನ್ನೂ ಪೂರ್ಣಪ್ರಮಾಣದಲ್ಲಿ ಆರಂಭಗೊಂಡಿಲ್ಲ. ಅಲ್ಲದೆ, ಇದು ಹಲವು ಸಾಮಾಜಿಕ ಪಿಡುಗುಗಳಿಗೂ ಕಾರಣವಾಗುತ್ತಿದೆ.ಇಂತಹ ಸಂದರ್ಭದಲ್ಲಿ ಶಾಲೆಗಳನ್ನು ಆರಂಭಿಸುವ ಬಗ್ಗೆ ಸಲಹೆ ನೀಡುವಂತೆ ಪತ್ರದಲ್ಲಿ ಕೋರಿದ್ದಾರೆ.</p>.<p>ಕೊರೊನಾ ಸಾಂಕ್ರಾಮಿಕ ರೋಗದ ಪ್ರಸರಣ ದಿನದಿಂದ ದಿನಕ್ಕೆ ತೀವ್ರವಾಗುತ್ತಲೇ ಸಾಗಿದೆ. ಈ ಪರಿಸ್ಥಿತಿಯ ನಡುವೆಯೇ ಸಾಮಾಜಿಕ ಜೀವನ ತಹಬಂದಿಗೆ ಮರಳಬೇಕಿದೆ. ಕೊರೊನಾ ಕಾರಣಕ್ಕಾಗಿ ಅತ್ಯಂತ ಸಂಕಷ್ಟಕ್ಕೆ ಸಿಲುಕಿರುವುದು ಶಿಕ್ಷಣ ಕ್ಷೇತ್ರವಾಗಿದೆ ಎಂದೂ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೊರೊನಾ ಪರಿಸ್ಥಿತಿಯಲ್ಲಿ ಶಾಲಾರಂಭ ಮತ್ತು ಸಮುದಾಯದ ಸಹಕಾರ ಕುರಿತಂತೆ ತಮ್ಮ ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ಎಲ್ಲ ಸಚಿವರು ಮತ್ತು ಶಾಸಕರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.</p>.<p>ಶಾಲೆಗಳನ್ನು ಯಾವಾಗ ಆರಂಭಿಸಬಹುದು, ಒಂದು ವೇಳೆ ಆರಂಭಿಸುವುದಾದರೆ ಯಾವ ತರಗತಿಯನ್ನು ಮೊದಲು ಆರಂಭಿಸಬಹುದು, ಸಮುದಾಯ ಮತ್ತು ಜನಪ್ರತಿನಿಧಿಗಳಿಂದ ಶಿಕ್ಷಣ ಇಲಾಖೆ ಯಾವ ರೀತಿಯ ಸಹಕಾರ ನಿರೀಕ್ಷಿಸಬಹುದು ಎಂಬ ಬಗ್ಗೆ ಸಲಹೆ, ಸೂಚನೆ ನೀಡುವಂತೆ ಪತ್ರದಲ್ಲಿ ಅವರು ಕೋರಿದ್ದಾರೆ.</p>.<p>ಕೊರೊನಾ ಕಾರಣದಿಂದ ಕಳೆದ ಮಾರ್ಚ್ ನಲ್ಲಿ ಮುಚ್ಚಿದ ಶಾಲೆಗಳನ್ನು ಇನ್ನೂ ತೆರೆಯಲಾಗುತ್ತಿಲ್ಲ. ಜೂನ್ ನಲ್ಲಿ ಆರಂಭವಾಗಬೇಕಿದ್ದ ಪ್ರಸಕ್ತ ಶೈಕ್ಷಣಿಕ ಸಾಲಿನ ಚಟುವಟಿಕೆ ಇನ್ನೂ ಪೂರ್ಣಪ್ರಮಾಣದಲ್ಲಿ ಆರಂಭಗೊಂಡಿಲ್ಲ. ಅಲ್ಲದೆ, ಇದು ಹಲವು ಸಾಮಾಜಿಕ ಪಿಡುಗುಗಳಿಗೂ ಕಾರಣವಾಗುತ್ತಿದೆ.ಇಂತಹ ಸಂದರ್ಭದಲ್ಲಿ ಶಾಲೆಗಳನ್ನು ಆರಂಭಿಸುವ ಬಗ್ಗೆ ಸಲಹೆ ನೀಡುವಂತೆ ಪತ್ರದಲ್ಲಿ ಕೋರಿದ್ದಾರೆ.</p>.<p>ಕೊರೊನಾ ಸಾಂಕ್ರಾಮಿಕ ರೋಗದ ಪ್ರಸರಣ ದಿನದಿಂದ ದಿನಕ್ಕೆ ತೀವ್ರವಾಗುತ್ತಲೇ ಸಾಗಿದೆ. ಈ ಪರಿಸ್ಥಿತಿಯ ನಡುವೆಯೇ ಸಾಮಾಜಿಕ ಜೀವನ ತಹಬಂದಿಗೆ ಮರಳಬೇಕಿದೆ. ಕೊರೊನಾ ಕಾರಣಕ್ಕಾಗಿ ಅತ್ಯಂತ ಸಂಕಷ್ಟಕ್ಕೆ ಸಿಲುಕಿರುವುದು ಶಿಕ್ಷಣ ಕ್ಷೇತ್ರವಾಗಿದೆ ಎಂದೂ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>