ರಾಜ್ಯದಲ್ಲಿ ಸೋಂಕು ಖಚಿತ ಪ್ರಮಾಣ ಶೇಕಡಾ 0.62ರಷ್ಟಿದ್ದು, ಕೊಂಚ ನೆಮ್ಮದಿಯನ್ನುಂಟು ಮಾಡಿದೆ. ಕೋವಿಡ್ ಕಾರಣದಿಂದ ಮೃತರಾದವರ ಪ್ರಮಾಣ ಶೇಕಡಾ 1.79 ಇದೆ. ಇಂದು ರಾಜ್ಯದಲ್ಲಿ 22 ಮಂದಿ ಕೋವಿಡ್ ಸೋಂಕಿನಿಂದ ಮೃತರಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ 6, ಬೆಂಗಳೂರು ನಗರ ಮತ್ತು ಉಡುಪಿಯಲ್ಲಿ ತಲಾ ಮೂವರು, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ. ಬಾಗಲಕೋಟೆ, ಬಳ್ಳಾರಿ, ಬೀದರ್, ಚಾಮರಾಜನಗರ, ಹಾಸನ ಹಾಗೂ ಮೈಸೂರಿನಲ್ಲಿ ತಲಾ 1 ಸಾವು ಸಂಭವಿಸಿರುವುದಾಗಿ ವರದಿಯಾಗಿದೆ.