<p><strong>ಬೆಂಗಳೂರು:</strong> ಕೊರೊನಾ ಸೋಂಕಿತರಲ್ಲಿ ಮಂಗಳವಾರ 8,387 ಮಂದಿ ಚೇತರಿಸಿಕೊಂಡಿದ್ದಾರೆ. ಒಂದು ದಿನದ ಅವಧಿಯಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಿದವರ ಗರಿಷ್ಠ ಸಂಖ್ಯೆ ಇದಾಗಿದ್ದು, ರಾಜ್ಯದಲ್ಲಿ ಗುಣಮುಖರಾದವರ ಸಂಖ್ಯೆ 1.56 ಲಕ್ಷ ದಾಟಿದೆ.</p>.<p>18 ದಿನಗಳಲ್ಲಿ 1.16 ಲಕ್ಷ ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದೇ ಅವಧಿಯಲ್ಲಿ 1.07 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಿದ್ದರಿಂದಾಗಿ ಅಧಿಕ ಸಂಖ್ಯೆಯಲ್ಲಿ ಪ್ರಕರಣಗಳು ಕೆಲದಿನಗಳಿಂದ ಪತ್ತೆಯಾಗುತ್ತಿವೆ.</p>.<p>ಒಂದೇ ದಿನ 28,867 ಆ್ಯಂಟಿಜೆನ್ ಸೇರಿದಂತೆ 59,088 ಮಂದಿಗೆ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಒಂದು ದಿನದ ಅವಧಿಯಲ್ಲಿ ನಡೆಸಲಾದ ಗರಿಷ್ಠ ಪರೀಕ್ಷೆಗಳು ಇವಾಗಿದ್ದು, ಹೊಸದಾಗಿ 7,665 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಪರಿಣಾಮ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2.40 ಲಕ್ಷ ದಾಟಿದೆ.</p>.<p>ಕೊರೊನಾ ಸೋಂಕಿತರಲ್ಲಿ ಮತ್ತೆ 139 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಇದರಿಂದಾಗಿ ರಾಜ್ಯದಲ್ಲಿ ಕೋವಿಡ್ಗೆ ಈವರೆಗೆ ಸಾವಿಗೀಡಾದವರ ಸಂಖ್ಯೆ 4,201ಕ್ಕೆ ತಲುಪಿದೆ. 48 ಗಂಟೆಗಳಲ್ಲಿ 254 ಮಂದಿ ಮೃತಪಟ್ಟಿರುವುದು ಖಚಿತಪಟ್ಟಿದೆ. ಹೊಸದಾಗಿ ವರದಿಯಾದ ಮರಣ ಪ್ರಕರಣಗಳಲ್ಲಿ 25 ಮಂದಿ 50 ವರ್ಷದೊಳಗಿನವರಾಗಿದ್ದಾರೆ.</p>.<p>ಬೆಂಗಳೂರಿನಲ್ಲಿ ಮತ್ತೆ 2,242 ಮಂದಿ ಸೋಂಕಿತರಾಗಿದ್ದಾರೆ. ಬಳ್ಳಾರಿ(673), ಉಡುಪಿ (421), ಬೆಳಗಾವಿ (395) ಮೈಸೂರು (357), ದಾವಣಗೆರೆ (332), ಶಿವಮೊಗ್ಗ (318) ಜಿಲ್ಲೆಯಲ್ಲಿಯೂ ಹೆಚ್ಚಿನ ಪ್ರಕರಣಗಳು ದೃಢಪಟ್ಟಿವೆ.</p>.<p>ಮಂಗಳವಾರ ವರದಿಯಾದ ಮರಣ ಪ್ರಕರಣಗಳಲ್ಲಿ ಬೆಂಗಳೂರು (49), ಧಾರವಾಡ (10), ದಕ್ಷಿಣ ಕನ್ನಡ (9), ಬಳ್ಳಾರಿ (9), ಬೆಳಗಾವಿ (7) ಜಿಲ್ಲೆಯಲ್ಲಿ ಅಧಿಕ ಮಂದಿ ಮೃತಪಟ್ಟಿರುವುದು ಖಚಿತಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೊರೊನಾ ಸೋಂಕಿತರಲ್ಲಿ ಮಂಗಳವಾರ 8,387 ಮಂದಿ ಚೇತರಿಸಿಕೊಂಡಿದ್ದಾರೆ. ಒಂದು ದಿನದ ಅವಧಿಯಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಿದವರ ಗರಿಷ್ಠ ಸಂಖ್ಯೆ ಇದಾಗಿದ್ದು, ರಾಜ್ಯದಲ್ಲಿ ಗುಣಮುಖರಾದವರ ಸಂಖ್ಯೆ 1.56 ಲಕ್ಷ ದಾಟಿದೆ.</p>.<p>18 ದಿನಗಳಲ್ಲಿ 1.16 ಲಕ್ಷ ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದೇ ಅವಧಿಯಲ್ಲಿ 1.07 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಿದ್ದರಿಂದಾಗಿ ಅಧಿಕ ಸಂಖ್ಯೆಯಲ್ಲಿ ಪ್ರಕರಣಗಳು ಕೆಲದಿನಗಳಿಂದ ಪತ್ತೆಯಾಗುತ್ತಿವೆ.</p>.<p>ಒಂದೇ ದಿನ 28,867 ಆ್ಯಂಟಿಜೆನ್ ಸೇರಿದಂತೆ 59,088 ಮಂದಿಗೆ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಒಂದು ದಿನದ ಅವಧಿಯಲ್ಲಿ ನಡೆಸಲಾದ ಗರಿಷ್ಠ ಪರೀಕ್ಷೆಗಳು ಇವಾಗಿದ್ದು, ಹೊಸದಾಗಿ 7,665 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಪರಿಣಾಮ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2.40 ಲಕ್ಷ ದಾಟಿದೆ.</p>.<p>ಕೊರೊನಾ ಸೋಂಕಿತರಲ್ಲಿ ಮತ್ತೆ 139 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಇದರಿಂದಾಗಿ ರಾಜ್ಯದಲ್ಲಿ ಕೋವಿಡ್ಗೆ ಈವರೆಗೆ ಸಾವಿಗೀಡಾದವರ ಸಂಖ್ಯೆ 4,201ಕ್ಕೆ ತಲುಪಿದೆ. 48 ಗಂಟೆಗಳಲ್ಲಿ 254 ಮಂದಿ ಮೃತಪಟ್ಟಿರುವುದು ಖಚಿತಪಟ್ಟಿದೆ. ಹೊಸದಾಗಿ ವರದಿಯಾದ ಮರಣ ಪ್ರಕರಣಗಳಲ್ಲಿ 25 ಮಂದಿ 50 ವರ್ಷದೊಳಗಿನವರಾಗಿದ್ದಾರೆ.</p>.<p>ಬೆಂಗಳೂರಿನಲ್ಲಿ ಮತ್ತೆ 2,242 ಮಂದಿ ಸೋಂಕಿತರಾಗಿದ್ದಾರೆ. ಬಳ್ಳಾರಿ(673), ಉಡುಪಿ (421), ಬೆಳಗಾವಿ (395) ಮೈಸೂರು (357), ದಾವಣಗೆರೆ (332), ಶಿವಮೊಗ್ಗ (318) ಜಿಲ್ಲೆಯಲ್ಲಿಯೂ ಹೆಚ್ಚಿನ ಪ್ರಕರಣಗಳು ದೃಢಪಟ್ಟಿವೆ.</p>.<p>ಮಂಗಳವಾರ ವರದಿಯಾದ ಮರಣ ಪ್ರಕರಣಗಳಲ್ಲಿ ಬೆಂಗಳೂರು (49), ಧಾರವಾಡ (10), ದಕ್ಷಿಣ ಕನ್ನಡ (9), ಬಳ್ಳಾರಿ (9), ಬೆಳಗಾವಿ (7) ಜಿಲ್ಲೆಯಲ್ಲಿ ಅಧಿಕ ಮಂದಿ ಮೃತಪಟ್ಟಿರುವುದು ಖಚಿತಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>