<p><strong>ಮಂಗಳೂರು:</strong> ಪಿಎಚ್.ಡಿ ವಿದ್ಯಾರ್ಥಿನಿಯಿಂದ ಲಂಚ ಪಡೆದಿದ್ದ ಮಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಅನಿತಾ ರವಿಶಂಕರ್ ಅವರಿಗೆ, ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ.</p>.<p>ಪಿಎಚ್.ಡಿ ಪ್ರಬಂಧ ಅಂಗೀಕರಿಸಲು ಮೈಸೂರಿನಿಂದ ಬರುವ ಬಾಹ್ಯ ಪರಿವೀಕ್ಷಕರ ಖರ್ಚಿಗೆ ಹಣ ಕೊಡಬೇಕು ಎಂದು ಡಾ.ಅನಿತಾ ಅವರು, ವಿದ್ಯಾರ್ಥಿನಿಗೆ ಬೇಡಿಕೆ ಇಟ್ಟಿದ್ದರು. ಮೊದಲು ₹10 ಸಾವಿರ, ನಂತರ ₹4 ಸಾವಿರ ಮತ್ತು ಆಮೇಲೆ ₹16,800ಕ್ಕೆ ಬೇಡಿಕೆ ಇಟ್ಟಿದ್ದರು. ಆ ಪೈಕಿ 2012ರ ಡಿಸೆಂಬರ್ 4ರಂದು ಮುಂಗಡ ₹5 ಸಾವಿರ ಪಡೆಯುತ್ತಿದ್ದಾಗ ಲೋಕಾಯುಕ್ತ ಇನ್ಸ್ಪೆಕ್ಟರ್ ಉಮೇಶ್ ಜಿ. ಶೇಟ್ ಹಾಗೂ ಸಿಬ್ಬಂದಿ, ಡಾ.ಅನಿತಾ ಅವರನ್ನು ಬಂಧಿಸಿದ್ದರು.</p>.<p>ಲೋಕಾಯುಕ್ತ ಪರವಾಗಿ ಒಟ್ಟು 9 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಬಿ.ಜಕಾತಿ ಅವರು, ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಕಲಂ 7ರ ಅಡಿ 2 ವರ್ಷ ಸಾದಾ ಶಿಕ್ಷೆ ಮತ್ತು ₹15 ಸಾವಿರ ದಂಡ, ಕಲಂ 13 (1)(ಡಿ) ಅಡಿ 3 ವರ್ಷ ಸಾದಾ ಶಿಕ್ಷೆ ಮತ್ತು ₹15 ಸಾವಿರ ದಂಡ ವಿಧಿಸಿದ್ದಾರೆ. ದಂಡ ತೆರಲು ವಿಫಲರಾದರೆ ತಲಾ ಒಂದು ತಿಂಗಳು ಸಾದಾ ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ. ಲೋಕಾಯುಕ್ತದ ಪರ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಪಿಎಚ್.ಡಿ ವಿದ್ಯಾರ್ಥಿನಿಯಿಂದ ಲಂಚ ಪಡೆದಿದ್ದ ಮಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಅನಿತಾ ರವಿಶಂಕರ್ ಅವರಿಗೆ, ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ.</p>.<p>ಪಿಎಚ್.ಡಿ ಪ್ರಬಂಧ ಅಂಗೀಕರಿಸಲು ಮೈಸೂರಿನಿಂದ ಬರುವ ಬಾಹ್ಯ ಪರಿವೀಕ್ಷಕರ ಖರ್ಚಿಗೆ ಹಣ ಕೊಡಬೇಕು ಎಂದು ಡಾ.ಅನಿತಾ ಅವರು, ವಿದ್ಯಾರ್ಥಿನಿಗೆ ಬೇಡಿಕೆ ಇಟ್ಟಿದ್ದರು. ಮೊದಲು ₹10 ಸಾವಿರ, ನಂತರ ₹4 ಸಾವಿರ ಮತ್ತು ಆಮೇಲೆ ₹16,800ಕ್ಕೆ ಬೇಡಿಕೆ ಇಟ್ಟಿದ್ದರು. ಆ ಪೈಕಿ 2012ರ ಡಿಸೆಂಬರ್ 4ರಂದು ಮುಂಗಡ ₹5 ಸಾವಿರ ಪಡೆಯುತ್ತಿದ್ದಾಗ ಲೋಕಾಯುಕ್ತ ಇನ್ಸ್ಪೆಕ್ಟರ್ ಉಮೇಶ್ ಜಿ. ಶೇಟ್ ಹಾಗೂ ಸಿಬ್ಬಂದಿ, ಡಾ.ಅನಿತಾ ಅವರನ್ನು ಬಂಧಿಸಿದ್ದರು.</p>.<p>ಲೋಕಾಯುಕ್ತ ಪರವಾಗಿ ಒಟ್ಟು 9 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಬಿ.ಜಕಾತಿ ಅವರು, ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಕಲಂ 7ರ ಅಡಿ 2 ವರ್ಷ ಸಾದಾ ಶಿಕ್ಷೆ ಮತ್ತು ₹15 ಸಾವಿರ ದಂಡ, ಕಲಂ 13 (1)(ಡಿ) ಅಡಿ 3 ವರ್ಷ ಸಾದಾ ಶಿಕ್ಷೆ ಮತ್ತು ₹15 ಸಾವಿರ ದಂಡ ವಿಧಿಸಿದ್ದಾರೆ. ದಂಡ ತೆರಲು ವಿಫಲರಾದರೆ ತಲಾ ಒಂದು ತಿಂಗಳು ಸಾದಾ ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ. ಲೋಕಾಯುಕ್ತದ ಪರ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>