ಮಸೂದೆಗಳನ್ನು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮಂಡಿಸಿದರು. ಠೇವಣಿದಾರರ ಹಿತಾಸಕ್ತಿಯನ್ನು ದೃಷ್ಟಿಯಲ್ಲಿಟ್ಟು, ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಕಾಯ್ದೆಯ ತಿದ್ದುಪಡಿಗೆ ಪ್ರಸ್ತಾಪಿಸಲಾಗಿದೆ.ಬಗರ್ ಹುಕುಂ ಅರ್ಜಿ ಹಾಕಲು ಮತ್ತೊಂದು ಅವಕಾಶ ಕಲ್ಪಿಸಲು ಜನರು, ಜನಪ್ರತಿನಿಧಿಗಳಿಂದ ಮನವಿ ಬಂದಿತ್ತು. .ಹೀಗಾಗಿ, ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಸೀಮಿತವಾಗಿ ತಿದ್ದುಪಡಿಗೆ ಮಸೂದೆ ಮಂಡಿಸಲಾಗಿದೆ ಎಂದರು.