ಮಸೂದೆಯನ್ನು ಹಿಂಪಡೆಯುವಂತೆ ಅಥವಾ ಜಂಟಿ ಪರಿಶೀಲನಾ ಸಮಿತಿಗೆ ಒಪ್ಪಿಸುವಂತೆ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಕಾಂಗ್ರೆಸ್ ನ ಕೆ.ಸಿ. ಕೊಂಡಯ್ಯ, ಬಿ.ಕೆ. ಹರಿಪ್ರಸಾದ್, ಎಂ. ನಾರಾಯಣಸ್ವಾಮಿ, ಜೆಡಿಎಸ್ ನ ಬಸವರಾಜ ಹೊರಟ್ಟಿ, ಮರಿತಿಬ್ಬೇಗೌಡ ಸೇರಿದಂತೆ ಹಲವರು ಆಗ್ರಹಿಸಿದರು. ಆರಂಭದಲ್ಲಿ ಬಿಜೆಪಿಯ ಆಯನೂರು ಮಂಜುನಾಥ್ ಕೂಡ ಮಸೂದೆಯನ್ನು ವಿರೋಧಿಸಿದ್ದರು.