ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರನ್ನು ಪದಚ್ಯುತಗೊಳಿಸಲೇಬೇಕೆಂಬ ಹಟಕ್ಕೆ ಬಿದ್ದಿರುವ ಆಡಳಿತಾರೂಢ ಬಿಜೆಪಿ ಪ್ರಯತ್ನಕ್ಕೆ ವಿರೋಧ ಪಕ್ಷ ಕಾಂಗ್ರೆಸ್ ಯಾವ ನಡೆ ಅನುಸರಿಸಲಿದೆ ಹಾಗೂ ಪರಿಷತ್ತಿನಲ್ಲಿ ಕಾಂಗ್ರೆಸ್ ಜತೆಗೆ ಇರುವ ಜೆಡಿಎಸ್ ಸದಸ್ಯರ ನಡೆಯೇನು ಎಂಬುದು ಬಹಿರಂಗವಾಗಿಲ್ಲ. ಸಭಾಪತಿ ಪರವಾಗಿ ನಿಂತಿರುವ ಕಾಂಗ್ರೆಸ್, ಸದನದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ತಮ್ಮ ಸದಸ್ಯರಿಗೆ ವಿಪ್ ಜಾರಿ ಮಾಡಿ ಅಖಾಡಕ್ಕೆ ಇಳಿದಿದೆ.