ಈ ಪ್ರಕರಣ ರದ್ಧು ಮಾಡುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ಹೈಕೋರ್ಟ್, ವಿಶೇಷ ನ್ಯಾಯಾಲಯದಲ್ಲಿ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸುವಂತೆ 2020ರ ಡಿಸೆಂಬರ್ 22ರಂದು ಆದೇಶಿಸಿತ್ತು. ಜ.18ರಂದು 10,000 ಪುಟಗಳಷ್ಟು ದಾಖಲೆಗಳೊಂದಿಗೆ ‘ಸಿ’ ವರದಿ ಸಲ್ಲಿಸಿದ್ದ ಲೋಕಾಯುಕ್ತ ಪೊಲೀಸರು, ಪ್ರಕರಣದ ವಿಚಾರಣೆ ಕೈಬಿಡುವಂತೆ ಶಿಫಾರಸು ಮಾಡಿದ್ದರು.