ಕೆಜಿಎಫ್-2 ಚಿತ್ರದ ಸಂಗೀತವನ್ನು ಅನಧಿಕೃತವಾಗಿ ಬಳಸಿಕೊಂಡ ವಿಚಾರದಲ್ಲಿ ವಿದ್ಯುನ್ಮಾನ ಪರಿಶೋಧನೆ ಮಾಡ
ಬೇಕಿದೆ. ಐಎನ್ಸಿ ಇಂಡಿಯಾದ ಟ್ವಿಟರ್, ಭಾರತ್ ಜೋಡೊ ಯಾತ್ರೆಯ ಟ್ವಿಟರ್, ಫೇಸ್ಬುಕ್, ಯೂ ಟ್ಯೂಬ್, ಇನ್ಸ್ಟ್ರಾಗ್ರಾಂ ಸಾಮಾಜಿಕ ಜಾಲತಾಣದ ಅಧಿಕೃತ ಖಾತೆಯಲ್ಲಿರುವ ಹಕ್ಕುಸ್ವಾಮ್ಯ ಮತ್ತು ಬೌದ್ಧಿಕ ಆಸ್ತಿ ಹಕ್ಕಿಗೆ ಸಂಬಂಧಿಸಿದ ಸಾಮಗ್ರಿಗಳನ್ನು ವಿದ್ಯುನ್ಮಾನ ಪರಿಶೋಧನೆ ನಡೆಸಲು ವಾಣಿಜ್ಯ ನ್ಯಾಯಲಯದ ಕಂಪೂಟರ್ ವಿಭಾಗದ ಜಿಲ್ಲಾ ಸಿಸ್ಟಮ್ಸ್ ಆಡಳಿತಾಧಿಕಾರಿ ಎಸ್.ಎನ್. ವೆಂಕಟೇಶ ಮೂರ್ತಿ ಅವರನ್ನು ಸ್ಥಳೀಯ ಕಮೀಷನರ್ ಆಗಿ ನೇಮಕ ಮಾಡಿ ನ್ಯಾಯಾಲಯ ಆದೇಶಿಸಿದೆ.