ಮುಖ್ಯಮಂತ್ರಿ ಯಡಿಯೂರಪ್ಪನವರ ಅಧಿಕೃತ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಎರಡು ದಿನಗಳಿಂದ ಮಠಾಧೀಶರ ಸಮಾವೇಶವೇ ನಡೆಯುತ್ತಿದೆ. ಅಲ್ಲಿ ಸೇರಿದ್ದ ಕೆಲವು ಸ್ವಾಮೀಜಿಗಳಿಗೆ ಯಡಿಯೂರಪ್ಪ ಅವರ ಸಮ್ಮುಖದಲ್ಲೇ ಲಕೋಟೆ ಹಂಚುತ್ತಿರುವ ವಿಡಿಯೊ ಹರಿದಾಡುತ್ತಿದೆ. ಆ ಲಕೋಟೆಯಲ್ಲಿ ಏನಿದೆ ಎಂಬ ಕುತೂಹಲಕಾರಿ ಚರ್ಚೆಯೂ ನಡೆಯುತ್ತಿದೆ.