<p><strong>ಬೆಂಗಳೂರು: </strong>‘ಮರಳಿ ಕಾಲೇಜಿಗೆ’ ಎನ್ನುವ ಘೋಷವಾಕ್ಯದಡಿ ಕಾಲೇಜುಗಳನ್ನು ಆರಂಭಿಸಲು ಚಿಂತನೆ ನಡೆದಿದೆ. ಹೀಗಾಗಿ, ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲು ತೀರ್ಮಾನಿಸಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಕೋವಿಡ್ ಮೂರನೇ ಅಲೆಯ ಮುನ್ನೆಚ್ಚರಿಕೆಯೂ ಸೇರಿ ಎಲ್ಲ ಅಂಶಗಳನ್ನು ಒಳಗೊಂಡ ವರದಿಯನ್ನು ಡಾ. ದೇವಿಶೆಟ್ಟಿ ನೇತೃತ್ವದ ಸಮಿತಿ ನೀಡಿದೆ. ಮೊದಲು ಕಾಲೇಜುಗಳನ್ನು ತೆರೆಯುವಂತೆ ಸಮಿತಿ ಶಿಫಾರಸು ಮಾಡಿದೆ. ಜುಲೈ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಉದ್ದೇಶವಿದೆ ಎಂದರು.</p>.<p>‘ಕೇಂದ್ರ ಸರ್ಕಾರ ನೀಡುವ ಮಾರ್ಗಸೂಚಿಗೆ ಕಾಯುತ್ತಿದ್ದೇವೆ. ಈಗಾಗಲೇ 18 ವರ್ಷ ದಾಟಿದ ಎಲ್ಲರಿಗೂ ಲಸಿಕೆ ನೀಡುವ ಕೆಲಸ ಮುಂದುವರಿದಿದೆ. ಅದರಲ್ಲೂ ವಿದ್ಯಾರ್ಥಿಗಳನ್ನು ಆದ್ಯತಾ ಗುಂಪಿಗೆ ಸೇರಿಸಿ ಲಸಿಕೆ ನೀಡಲಾಗುವುದು’ ಎಂದರು.</p>.<p>ಲಸಿಕೆ ಮಾತ್ರ ಪರಿಹಾರ: ‘ಕೋವಿಡ್ ಡೆಲ್ಟಾ ಪ್ಲಸ್ ಸೋಂಕು ರಾಜ್ಯಕ್ಕೆ ಕಾಲಿಟ್ಟಿರುವ ಬಗ್ಗೆ ಮಾಹಿತಿ ಬಂದಿದೆ. ಲಸಿಕೆ ಪಡೆದಿದ್ದರೆ ಯಾವುದೇ ರೂಪಾಂತರ ವೈರಾಣು ಬಂದರೂ ತೊಂದರೆ ಆಗುವುದಿಲ್ಲ. ಎಲ್ಲರೂ ಲಸಿಕೆ ಪಡೆಯುವುದೊಂದೇ ಪರಿಹಾರ’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಮರಳಿ ಕಾಲೇಜಿಗೆ’ ಎನ್ನುವ ಘೋಷವಾಕ್ಯದಡಿ ಕಾಲೇಜುಗಳನ್ನು ಆರಂಭಿಸಲು ಚಿಂತನೆ ನಡೆದಿದೆ. ಹೀಗಾಗಿ, ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲು ತೀರ್ಮಾನಿಸಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಕೋವಿಡ್ ಮೂರನೇ ಅಲೆಯ ಮುನ್ನೆಚ್ಚರಿಕೆಯೂ ಸೇರಿ ಎಲ್ಲ ಅಂಶಗಳನ್ನು ಒಳಗೊಂಡ ವರದಿಯನ್ನು ಡಾ. ದೇವಿಶೆಟ್ಟಿ ನೇತೃತ್ವದ ಸಮಿತಿ ನೀಡಿದೆ. ಮೊದಲು ಕಾಲೇಜುಗಳನ್ನು ತೆರೆಯುವಂತೆ ಸಮಿತಿ ಶಿಫಾರಸು ಮಾಡಿದೆ. ಜುಲೈ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಉದ್ದೇಶವಿದೆ ಎಂದರು.</p>.<p>‘ಕೇಂದ್ರ ಸರ್ಕಾರ ನೀಡುವ ಮಾರ್ಗಸೂಚಿಗೆ ಕಾಯುತ್ತಿದ್ದೇವೆ. ಈಗಾಗಲೇ 18 ವರ್ಷ ದಾಟಿದ ಎಲ್ಲರಿಗೂ ಲಸಿಕೆ ನೀಡುವ ಕೆಲಸ ಮುಂದುವರಿದಿದೆ. ಅದರಲ್ಲೂ ವಿದ್ಯಾರ್ಥಿಗಳನ್ನು ಆದ್ಯತಾ ಗುಂಪಿಗೆ ಸೇರಿಸಿ ಲಸಿಕೆ ನೀಡಲಾಗುವುದು’ ಎಂದರು.</p>.<p>ಲಸಿಕೆ ಮಾತ್ರ ಪರಿಹಾರ: ‘ಕೋವಿಡ್ ಡೆಲ್ಟಾ ಪ್ಲಸ್ ಸೋಂಕು ರಾಜ್ಯಕ್ಕೆ ಕಾಲಿಟ್ಟಿರುವ ಬಗ್ಗೆ ಮಾಹಿತಿ ಬಂದಿದೆ. ಲಸಿಕೆ ಪಡೆದಿದ್ದರೆ ಯಾವುದೇ ರೂಪಾಂತರ ವೈರಾಣು ಬಂದರೂ ತೊಂದರೆ ಆಗುವುದಿಲ್ಲ. ಎಲ್ಲರೂ ಲಸಿಕೆ ಪಡೆಯುವುದೊಂದೇ ಪರಿಹಾರ’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>