<p><strong>ಬೆಂಗಳೂರು:</strong> ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ನಿನ್ನೆಗಿಂತ ಕೊಂಚ ಏರಿಕೆ ಕಂಡು ಬಂದಿದ್ದು 24 ಗಂಟೆಗಳ ಅವಧಿಯಲ್ಲಿ 4,436 ಪ್ರಕರಣಗಳು ದೃಢಪಟ್ಟಿವೆ. ನಿನ್ನೆ ಈ ಸಂಖ್ಯೆ 3,708 ಇತ್ತು. ಇದುವರೆಗೆ ಒಟ್ಟು 26,68,705 ಜನರು ಗುಣಮುಖರಾಗಿದ್ದಾರೆ.</p>.<p>ರಾಜ್ಯದಲ್ಲಿ ಈವರೆಗೆ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 34 ಸಾವಿರದ ಗಡಿ ದಾಟಿದೆ. ಬುಧವಾರ 123 ಮಂದಿ ಸಾವಿಗೀಡಾಗಿರುವ ಕಾರಣ ಒಟ್ಟು ಸಂಖ್ಯೆ 34,287ಕ್ಕೆ ಹೆಚ್ಚಿದೆ. ಮರಣ ಪ್ರಮಾಣ ದರ ಶೇ 2.77ಕ್ಕೆ ತಲುಪಿದೆ.</p>.<p>ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಅಲ್ಪ ಏರಿಕೆ ಕಂಡಿದೆ. ಹೊಸದಾಗಿ 4,436 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಕೋವಿಡ್ ಪೀಡಿತರ ಒಟ್ಟು ಸಂಖ್ಯೆ 28.19 ಲಕ್ಷಕ್ಕೆ ಏರಿಕೆಯಾಗಿದೆ. ಸೋಂಕು ದೃಢ ಪ್ರಮಾಣ ಶೇ 2.59ಕ್ಕೆ ತಲುಪಿದೆ.</p>.<p>ಕೋವಿಡ್ ಪೀಡಿತರ ಪೈಕಿ 6,455 ಮಂದಿಯಲ್ಲಿ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಗುಣಮುಖರ ಸಂಖ್ಯೆ 26.68 ಲಕ್ಷಕ್ಕೆ ಹೆಚ್ಚಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1.16 ಲಕ್ಷಕ್ಕೆ ಇಳಿದಿದೆ.</p>.<p>ಇದನ್ನೂ ಓದಿ: <a href="https://www.prajavani.net/karnataka-news/prajavani-deccan-herald-covid-19-relief-fund-839457.html">ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಕೋವಿಡ್-19 ಪರಿಹಾರ ನಿಧಿ</a></p>.<p>ಬೆಂಗಳೂರು ನಗರ (24), ದಕ್ಷಿಣ ಕನ್ನಡ (13) ಮತ್ತು ಮೈಸೂರು (18) ಬುಧವಾರ ಅಧಿಕ ಮಂದಿ ಅಸುನೀಗಿದ್ದಾರೆ. ಬಳ್ಳಾರಿ(10), ಧಾರವಾಡ(9), ದಾವಣಗೆರೆ (8), ಬೆಳಗಾವಿ(5) ಮಂದಿ ಸತ್ತಿದ್ದಾರೆ. ಇಂದು ಕೋವಿಡ್ನಿಂದ ರಾಜ್ಯದಲ್ಲಿ ಸತ್ತವರ ಸಂಖ್ಯೆ 123.</p>.<p>ಬೆಂಗಳೂರು ನಗರದಲ್ಲಿ ಹೊಸದಾಗಿ 1008 ಮಂದಿಗೆ ಸೋಂಕು ತಗುಲಿದೆ. ದಕ್ಷಿಣ ಕನ್ನಡದಲ್ಲಿ 538 ಹೊಸ ಪ್ರಕರಣಗಳು ಕಂಡುಬಂದಿವೆ. ಮೈಸೂರಿನಲ್ಲಿ 499, ಹಾಸನದಲ್ಲಿ 301, ಶಿವಮೊಗ್ಗದಲ್ಲಿ 219 ಹೊಸ ಸಕ್ರಿಯ ಪ್ರಕರಣಗಳು ದಾಖಲಾಗಿವೆ. 27 ಜಿಲ್ಲೆಗಳಲ್ಲಿ 200ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ನಿನ್ನೆಗಿಂತ ಕೊಂಚ ಏರಿಕೆ ಕಂಡು ಬಂದಿದ್ದು 24 ಗಂಟೆಗಳ ಅವಧಿಯಲ್ಲಿ 4,436 ಪ್ರಕರಣಗಳು ದೃಢಪಟ್ಟಿವೆ. ನಿನ್ನೆ ಈ ಸಂಖ್ಯೆ 3,708 ಇತ್ತು. ಇದುವರೆಗೆ ಒಟ್ಟು 26,68,705 ಜನರು ಗುಣಮುಖರಾಗಿದ್ದಾರೆ.</p>.<p>ರಾಜ್ಯದಲ್ಲಿ ಈವರೆಗೆ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 34 ಸಾವಿರದ ಗಡಿ ದಾಟಿದೆ. ಬುಧವಾರ 123 ಮಂದಿ ಸಾವಿಗೀಡಾಗಿರುವ ಕಾರಣ ಒಟ್ಟು ಸಂಖ್ಯೆ 34,287ಕ್ಕೆ ಹೆಚ್ಚಿದೆ. ಮರಣ ಪ್ರಮಾಣ ದರ ಶೇ 2.77ಕ್ಕೆ ತಲುಪಿದೆ.</p>.<p>ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಅಲ್ಪ ಏರಿಕೆ ಕಂಡಿದೆ. ಹೊಸದಾಗಿ 4,436 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಕೋವಿಡ್ ಪೀಡಿತರ ಒಟ್ಟು ಸಂಖ್ಯೆ 28.19 ಲಕ್ಷಕ್ಕೆ ಏರಿಕೆಯಾಗಿದೆ. ಸೋಂಕು ದೃಢ ಪ್ರಮಾಣ ಶೇ 2.59ಕ್ಕೆ ತಲುಪಿದೆ.</p>.<p>ಕೋವಿಡ್ ಪೀಡಿತರ ಪೈಕಿ 6,455 ಮಂದಿಯಲ್ಲಿ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಗುಣಮುಖರ ಸಂಖ್ಯೆ 26.68 ಲಕ್ಷಕ್ಕೆ ಹೆಚ್ಚಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1.16 ಲಕ್ಷಕ್ಕೆ ಇಳಿದಿದೆ.</p>.<p>ಇದನ್ನೂ ಓದಿ: <a href="https://www.prajavani.net/karnataka-news/prajavani-deccan-herald-covid-19-relief-fund-839457.html">ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಕೋವಿಡ್-19 ಪರಿಹಾರ ನಿಧಿ</a></p>.<p>ಬೆಂಗಳೂರು ನಗರ (24), ದಕ್ಷಿಣ ಕನ್ನಡ (13) ಮತ್ತು ಮೈಸೂರು (18) ಬುಧವಾರ ಅಧಿಕ ಮಂದಿ ಅಸುನೀಗಿದ್ದಾರೆ. ಬಳ್ಳಾರಿ(10), ಧಾರವಾಡ(9), ದಾವಣಗೆರೆ (8), ಬೆಳಗಾವಿ(5) ಮಂದಿ ಸತ್ತಿದ್ದಾರೆ. ಇಂದು ಕೋವಿಡ್ನಿಂದ ರಾಜ್ಯದಲ್ಲಿ ಸತ್ತವರ ಸಂಖ್ಯೆ 123.</p>.<p>ಬೆಂಗಳೂರು ನಗರದಲ್ಲಿ ಹೊಸದಾಗಿ 1008 ಮಂದಿಗೆ ಸೋಂಕು ತಗುಲಿದೆ. ದಕ್ಷಿಣ ಕನ್ನಡದಲ್ಲಿ 538 ಹೊಸ ಪ್ರಕರಣಗಳು ಕಂಡುಬಂದಿವೆ. ಮೈಸೂರಿನಲ್ಲಿ 499, ಹಾಸನದಲ್ಲಿ 301, ಶಿವಮೊಗ್ಗದಲ್ಲಿ 219 ಹೊಸ ಸಕ್ರಿಯ ಪ್ರಕರಣಗಳು ದಾಖಲಾಗಿವೆ. 27 ಜಿಲ್ಲೆಗಳಲ್ಲಿ 200ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>