ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 21 ಜಿಲ್ಲೆಗಳಲ್ಲಿ 100ರ ಒಳಗೆ ಹೊಸ ಪ್ರಕರಣಗಳು

50ರ ಗಡಿಯೊಳಗೆ ಮರಣ ಪ್ರಕರಣ
Last Updated 10 ಜುಲೈ 2021, 21:51 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕಿತರಲ್ಲಿ 48 ಮಂದಿ ಮೃತಪಟ್ಟಿರುವುದು ಶನಿವಾರ ದೃಢಪಟ್ಟಿದೆ. ಮೂರು ತಿಂಗಳ ಅವಧಿಯಲ್ಲಿ ವರದಿಯಾದ ಕನಿಷ್ಠ ಮರಣ ಪ್ರಕರಣಗಳು ಇವಾಗಿವೆ.

ರಾಜ್ಯದಲ್ಲಿ ಏಪ್ರಿಲ್ ಎರಡನೇ ವಾರದ ಬಳಿಕ ಮರಣ ಪ್ರಕರಣಗಳ ಸಂಖ್ಯೆ 50ರ ಗಡಿ ದಾಟಿತ್ತು. ಬಳಿಕ ಏರಿಕೆ ಕಂಡು, 500ರ ಗಡಿ ತಲುಪಿತ್ತು. ಕಳೆದೊಂದು ತಿಂಗಳಿನಿಂದ ಮರಣ ಪ್ರಕರಣಗಳ ಸಂಖ್ಯೆ ಕೂಡ ಇಳಿಮುಖ ಮಾಡಿದೆ. ರಾಜ್ಯದ 17 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ದೃಢಪಟ್ಟಿವೆ.

ಮರಣ ಪ್ರಮಾಣ ದರವು ಶೇ 2.22ರಷ್ಟು ವರದಿಯಾಗಿದೆ. ದಕ್ಷಿಣ ಕನ್ನಡದಲ್ಲಿ 9, ಬೆಳಗಾವಿಯಲ್ಲಿ 6 ಹಾಗೂ ಬೆಂಗಳೂರಿನಲ್ಲಿ 5 ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 5ಕ್ಕಿಂತ ಕಡಿಮೆಯಿದೆ. ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 35,779ಕ್ಕೆ ತಲುಪಿದೆ.

ರಾಜ್ಯದಲ್ಲಿ ಹೊಸದಾಗಿ 2,162 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 28.69 ಲಕ್ಷ ದಾಟಿದೆ. ಒಂದು ದಿನದ ಅವಧಿಯಲ್ಲಿ 1.45 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದ್ದು, ಶೇ 1.48ರಷ್ಟು ಸೋಂಕು ದೃಢ ಪ್ರಮಾಣ ವರದಿಯಾಗಿದೆ.

ಬೆಂಗಳೂರಿನಲ್ಲಿ 452, ದಕ್ಷಿಣ ಕನ್ನಡದಲ್ಲಿ 218, ಮೈಸೂರಿನಲ್ಲಿ 211, ಹಾಸನದಲ್ಲಿ 178, ಉಡುಪಿಯಲ್ಲಿ 113, ಶಿವಮೊಗ್ಗದಲ್ಲಿ 110,
ಚಿಕ್ಕಮಗಳೂರಿನಲ್ಲಿ 109 ಹಾಗೂ ಬೆಳಗಾವಿಯಲ್ಲಿ 106 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ‍ಪ್ರಕರಣಗಳು 100ರ ಗಡಿಯೊಳಗೆ ವರದಿಯಾಗಿವೆ. 13 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ ಹಾಗೂ 8 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ.

ಸೋಂಕಿತರಲ್ಲಿ 2,879 ಮಂದಿಗೆ ಕಾಯಿಲೆ ವಾಸಿಯಾಗಿದೆ. ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 27.96 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದ್ದು, 37,141 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT