'ಮುಂದಿನ 7 ರಿಂದ 8 ವಾರ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ತಾಂತ್ರಿಕ ಸಲಹಾ ಸಮಿತಿಯಿಂದಲೂ ವರದಿ ಬಂದಿದೆ. ಗಡಿ ಬಂದ್ ಮಾಡಬಾರದು ಎಂದು ಕೇಂದ್ರ ಸರ್ಕಾರದ ಸ್ಪಷ್ಟ ಸೂಚನೆ ಇದೆ, ಆದರೆ, ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುತ್ತೇವೆ. ರಾಜ್ಯಕ್ಕೆ ತೀವ್ರತೆ ಇರುವ ವೈರಾಣು ಬಂದಿಲ್ಲ, ಆದರೆ ತೀವ್ರವಾಗಿ ಹರಡುವ ವೈರಾಣು ಬಂದಿದೆ' ಎಂದರು.