ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ರಾಜ್ಯ: 7 ದಿನಗಳಲ್ಲಿ ಗರಿಷ್ಠ ಮರಣ

Last Updated 17 ಆಗಸ್ಟ್ 2021, 17:50 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪೀಡಿತರಲ್ಲಿ 32 ಮಂದಿ ಮೃತಪಟ್ಟಿರುವುದು ಮಂಗಳವಾರ ದೃಢಪಟ್ಟಿದೆ. ಇವು ಏಳು ದಿನಗಳಲ್ಲಿ ವರದಿಯಾದ ಗರಿಷ್ಠ ಮರಣ ಪ್ರಕರಣಗಳಾಗಿವೆ.

ಆ.11ರಂದು 33 ಮಂದಿ ಮೃತಪಟ್ಟಿದ್ದರು. ಬಳಿಕ ಈ ಸಂಖ್ಯೆ ಇಳಿಕೆ ಕಂಡಿತ್ತು. 14 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 10, ದಕ್ಷಿಣ ಕನ್ನಡದಲ್ಲಿ 5, ಕೋಲಾರ, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗದಲ್ಲಿ ತಲಾ ಇಬ್ಬರು ಸಾವಿಗೀಡಾಗಿದ್ದಾರೆ. ಉತ್ತರ ಕನ್ನಡ ಸೇರಿದಂತೆ ಏಳು ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಮರಣ ಪ್ರಮಾಣ ದರವು ಶೇ 2.46 ರಷ್ಟು ವರದಿಯಾಗಿದೆ. ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 37,039ಕ್ಕೆ ಏರಿಕೆ ಕಂಡಿದೆ.

ರಾಜ್ಯದಲ್ಲಿ ಹೊಸದಾಗಿ 1,298 ಮಂದಿ ಕೊರೊನಾ ಸೋಂಕಿತ ರಾಗಿರುವುದು ದೃಢಪಟ್ಟಿದೆ. ಈವ ರೆಗೆ ವರದಿಯಾದ ಕೋವಿಡ್‌ ಪ್ರಕರಣಗಳ ಒಟ್ಟು ಸಂಖ್ಯೆ 29.31 ಲಕ್ಷ ದಾಟಿದೆ. ಒಂದು ದಿನದಲ್ಲಿ 1.28 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 1.01ರಷ್ಟು ವರದಿಯಾಗಿದೆ. 12 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 12 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ರಾಯಚೂರು, ಬೀದರ್ ಹಾಗೂ ಬಾಗಲಕೋಟೆಯಲ್ಲಿ ಹೊಸ ಪ್ರಕರಣ ವರದಿಯಾಗಿಲ್ಲ.

ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲಿ 288, ಮೈಸೂರಿನಲ್ಲಿ 88 ಹಾಗೂ ಕೊಡಗಿನಲ್ಲಿ 37, ಬೆಂಗಳೂರಿನಲ್ಲಿ 340 ಹಾಗೂ ಉಡುಪಿಯಲ್ಲಿ 122 ಮಂದಿ ಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ‍ಪ್ರಕರಣಗಳು 100ರ ಗಡಿಯೊಳಗೆ ಇವೆ. ಸೋಂಕಿತರಲ್ಲಿ 1,833 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 28.73 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 21,481ಕ್ಕೆ ಇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT