ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1,785 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು,25 ಜನರು ಮೃತಪಟ್ಟಿದ್ದಾರೆ.ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 29,13,512ಕ್ಕೆ ಏರಿಕೆಯಾಗಿದೆ. ಇದುವರೆಗೆ ಕೋವಿಡ್ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ36,705 ಆಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಈವರೆಗೆ 28,52,368 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 24,414 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇಂದು ಗುಣಮುಖರಾಗಿ 1,651 ಜನರು ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಇಂದು ಹೊಸದಾಗಿ 414 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ 12,04,878 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 12.29 ಲಕ್ಷದ ಗಡಿ ದಾಟಿದೆ. ಇಂದು ಐವರು ಮೃತಪಟ್ಟಿದ್ದು, ಈವರೆಗೂ 15,901 ಮಂದಿ ಸಾವಿಗೀಡಾಗಿದ್ದಾರೆ.
ಬಾಗಲಕೋಟೆಯಲ್ಲಿ 6, ಬಳ್ಳಾರಿ 6, ಬೆಳಗಾವಿ 27, ಬೆಂಗಳೂರು ಗ್ರಾಮಾಂತರ 40, ಬೀದರ್ 1, ಚಾಮರಾಜನಗರ 44, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರು 97, ಚಿತ್ರದುರ್ಗ 26, ದಕ್ಷಿಣ ಕನ್ನಡ 337, ದಾವಣಗೆರೆ 10, ಧಾರವಾಡ 10, ಗದಗ 5, ಹಾಸನ 125, ಹಾವೇರಿ 3, ಕಲಬುರಗಿ 9, ಕೊಡಗು 100, ಕೋಲಾರ 57, ಕೊಪ್ಪಳ 7, ಮಂಡ್ಯ 46, ಮೈಸೂರು 105, ರಾಯಚೂರು 7, ರಾಮನಗರ 8, ಶಿವಮೊಗ್ಗ 35, ತುಮಕೂರು 49, ಉಡುಪಿ 134, ಉತ್ತರ ಕನ್ನಡ 60, ವಿಜಯಪುರದಲ್ಲಿ ಐವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹೊಸ ಪ್ರಕರಣಗಳು ಪತ್ತೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.