ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update | 1,705 ಹೊಸ ಪ್ರಕರಣ, ಯಾವ ಜಿಲ್ಲೆಯಲ್ಲೆಷ್ಟು?

ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1,705 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು,30 ಜನರು ಮೃತಪಟ್ಟಿದ್ದಾರೆ.ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 28,91,699ಕ್ಕೆ ಏರಿಕೆಯಾಗಿದೆ. ಒಟ್ಟಾರೆ 36,323 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈವರೆಗೆ 28,31,226 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 24,127 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇಂದು ಗುಣಮುಖರಾಗಿ 2,243 ಜನರು ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 400 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ 11,99,859 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 12.24 ಲಕ್ಷದ ಗಡಿ ದಾಟಿದೆ. ಇಂದು 3 ಜನರು ಮೃತಪಟ್ಟಿದ್ದು, ಈವರೆಗೂ 15,820 ಮಂದಿ ಸಾವಿಗೀಡಾಗಿದ್ದಾರೆ.

ಬಾಗಲಕೋಟೆಯಲ್ಲಿ 8, ಬಳ್ಳಾರಿ 10, ಬೆಳಗಾವಿ 90, ಬೆಂಗಳೂರು ಗ್ರಾಮಾಂತರ 41, ಬೀದರ್ 2, ಚಾಮರಾಜನಗರ 30, ಚಿಕ್ಕಬಳ್ಳಾಪುರ 17, ಚಿಕ್ಕಮಗಳೂರು 69, ಚಿತ್ರದುರ್ಗ 10, ದಕ್ಷಿಣ ಕನ್ನಡ 295, ದಾವಣಗೆರೆ 20, ಧಾರವಾಡ 6, ಗದಗ 3, ಹಾಸನ 83, ಹಾವೇರಿ 4, ಕಲಬುರಗಿ 7, ಕೊಡಗು 62, ಕೋಲಾರ 34, ಕೊಪ್ಪಳ 3, ಮಂಡ್ಯ 38, ಮೈಸೂರು 157, ರಾಯಚೂರು 1, ರಾಮನಗರ 8, ಶಿವಮೊಗ್ಗ 74, ತುಮಕೂರು 72, ಉಡುಪಿ 131, ಉತ್ತರ ಕನ್ನಡ 23, ವಿಜಯಪುರ 4 ಮತ್ತು ಯಾದಗಿರಿಯಲ್ಲಿ ಮೂವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹೊಸ ಪ್ರಕರಣಗಳು ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT